ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಕುಂಭ ನಿಧಿಯ ಉದ್ಘಾಟನೆ

115.6K Views 17 Feb 2025

ಶ್ರೀ ರಕ್ತೇಶ್ವರೀ ದೇವೀ ಸನ್ನಿಧಿ ಬಿ ಸಿ ರೋಡ್ ಇಲ್ಲಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಕುಂಭ ನಿಧಿಯ ಉದ್ಘಾಟನೆ ಮತ್ತು 48 ದಿವಸಗಳ ಸಂಧ್ಯಾ ಭಜನೆ ಯ ಪ್ರಾರಂಭೋತ್ಸವ ಇಂದು ಸನ್ನಿಧಿಯಲ್ಲಿ ನಡೆಯಿತು. ಬ್ರಹ್ಮ ಕಲಶ ಸಮಿತಿಯ ಕೋಶಾಧಿಕಾರಿ ಯವರಾದ ಶ್ರೀ ನಾರಾಯಣ ಹೆಗ್ಡೆ ಬಿ ಸಿ ರೋಡ್ ಇವರು ಕುಂಭ ನಿಧಿಯ ಉದ್ಘಾಟನೆ ಯ ನ್ನು ನೆರವೇರಿಸಿದರು. ಸಂಧ್ಯಾ ಭಜನೆಯ ದೀಪ ಪ್ರಜ್ವಲನೆಯನ್ನು ಶ್ರೀಮತಿ ಮತ್ತು ಶ್ರೀ ರಘುಪತಿ ಭಟ್ ,ಅರ್ಚಕರು ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ. ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯ ಸೇವಾ ಸಮಿತಿ ಯ ಮಾಜಿ ಅಧ್ಯಕ್ಷರು ಗಳಾದ , ಶ್ರೀಮತಿ ಮತ್ತು ಶ್ರೀ ಗೋಪಾಲ ಸುವರ್ಣ,ಶ್ರೀಮತಿ ಮತ್ತು ಶ್ರೀ ರಾಜೇಶ್ ಎಲ್ ನಾಯಕ್, ಶ್ರೀಮತಿ ಮತ್ತು ಶ್ರೀ ಸೋಮನಾಥ ನಾಯ್ಡು , ಮತ್ತು ಸದಸ್ಯರಾದ ಶ್ರೀಮತಿ ಮತ್ತು ಶ್ರೀ ಶ್ರೀಧರ ಮಲ್ಲಿ ನೆರವೇರಿಸಿದರು. ಸಮಾರಂಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಬಿ ವಿಶ್ವನಾಥ , ಕಾರ್ಯದರ್ಶಿ ಶ್ರೀ ಶಿವಶಂಕರ್,ಕೋಶಾಧಿಕಾರಿ ಶ್ರೀ ಮೋಹನ್, ಸದಸ್ಯರಾದ ಶ್ರೀ ಸತೀಶ್ ಕುಮಾರ್, ಬ್ರಹ್ಮ ಕಲಶ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಗುರುಕೃಪ ,ಸಹ ಕೋಶಾಧಿಕಾರಿ ಶ್ರೀ ವಸಂತ್ ರಾವ್, ಸಮಿತಿಯ ಉಪಾಧ್ಯಕ್ಷರಾದ ಶ್ರೀ ಚಂದ್ರಹಾಸ ಶೆಟ್ಟಿ ರಂಗೋಲಿ, ಸಮಿತಿ ಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಐತಪ್ಪ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು, ಶ್ರೀ ಶ್ರೀವತ್ಸ ಭಟ್ ಮತ್ತು ಶ್ರೀ ಸುದರ್ಶನ್ ಸಹಕರಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top