“ತುಳು ಸಂಘಟನೆಗಳ ಪ್ರತಿನಿಧಿಗಳಿಂದ ಸ್ಪೀಕರ್ ಖಾದರ್ ಗೆ ಮನವಿ

116.1K Views 4 Apr 2025

ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್‌, ಸರ್ವೋತ್ತಮ ಶೆಟ್ಟಿ ಅಬುದಾಬಿ ಅವರ ನೇತೃತ್ವದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಖಾದರ್ ಅವರು ಬೇಡಿಕೆಗೆ ಸ್ಪಂದಿಸುವುದಾಗಿ ತಿಳಿಸಿದರು.

Read More News

Scroll to Top