ಸಂಘಟನೆಗಳು ಸಮಾಜದ ದೀಪವಾಗಬೇಕು: ಮಹಾಬಲ ಪೂಜಾರಿ ಕಡಂಬೋಡಿ.ಸುರತ್ಕಲ್ ನಲ್ಲಿ ಹಿರಿಯರ ಕ್ರಿಕೆಟ್ ಹಬ್ಬ

111.2K Views 8 Apr 2025

ಸುರತ್ಕಲ್: ಸಂಘಟನೆಗಳು ಸಮಾಜದ ದೀಪವಾಗಬೇಕು ಸಮಾಜಕ್ಕೆ ಮಾದರಿಯದಂತಹ ಕಾರ್ಯಗಳನ್ನು ಮಾಡಿದಾಗ ಮಾತ್ರ ಸಂಘಟನೆ ಪದದ ಸಾರ್ಥಕ್ಯ ಕಾಣಲು ಸಾಧ್ಯ ಎಂದು ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ ನುಡಿದರು.


ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ 4 ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ಬಿ,ಎ,ಎಸ್,ಎಪ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಪ್ರಭಂದಕರಾದ ಸಂತೋಷ್ ಪೈ, ಮನಪಾ ಮಾಜಿ ಸದಸ್ಯ ವರುಣ್ ಚೌಟ, ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅರ್ಜುನ್ ಭಂಡಾರ್ಕರ್, ಎನ್ ಐ ಟಿ ಕೆ ಮಾಜಿ ಜಂಟಿ ಕುಲಪತಿ ರಾಮಮೋಹನ್ ಎಣ್ಮಕಜೆ, ಮಂಗಳೂರು ಎಸ್ ಡಿ ಸಿ ಸಿ ಬ್ಯಾಂಕ್ ಎ.ಜಿ.ಎಂ ರಾಜೇಶ್ ಶೆಟ್ಟಿ, ಬಾಲಕೃಷ್ಣ ಕೆಂಚನೂರು, ಮಂಗಳೂರು ಬಿ.ಎಂ.ಅರ್ ಗ್ರೂಪ್ ಮಾಲಕರು ದಾವೂದ್ ಹಕಿಂ, ಸುರತ್ಕಲ್ ಸ್ಪೋರ್ಟ್ಸ ಕ್ಲಬ್ ಸಂಚಾಲಕರು ಮನೋಹರ ಶೆಟ್ಟಿ ಸೂರಿಂಜೆ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಕಾರ್ಯದರ್ಶಿ ಕಿರಣ್ ಅಚಾರ್ಯ ಉಪಸ್ಥಿತರಿದ್ದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ದುರ್ಗಾಂಬ ತಡಂಬೈಲ್, ದ್ವೀತಿಯ ವೀರಕೇಸರಿ ತಡಂಬೈಲ್, ತೃತೀಯ ಬಿ.ಜೆ,ಸ್ಪಾರ್ಕ್ ಉಡುಪಿ ಚತುರ್ಥ ಆನಂದಿಲೆವೆನ್ ಬೆಂಗಳೂರು ಪಡೆಯಿತು. ಇದೇ ಸಂದರ್ಭದಲ್ಲಿ ಬಬಿತಾ ಜೆ ಶೆಟ್ಟಿ ಮತ್ತು ಅರ್ಜುನ್ ಭಂಡಾರ್ಕರ್ ಇವರನ್ನು ಸನ್ಮಾನಿಸಲಾಯಿತು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top