ಆರೋಗ್ಯವು ಒಂದು ಹೂಡಿಕೆ, ಅದೊಂದು ವೆಚ್ಚವಲ್ಲ: ಫಾ. ಕ್ಲಿಫರ್ಡ್ ಫೆರ್ನಾಂಡಿಸ್‌

119.7K Views 6 May 2025

ಮಂಗಳೂರು: ಕುಲಶೇಖರದ ಕೋರ್ಡೆಲ್ ಹೋಲಿ ಕ್ರಾಸ್ ಚರ್ಚ್ ನಲ್ಲಿ ಬೆಥನಿ ಜೀವನ್‌ಧಾರಾ ಆರೋಗ್ಯ ಆಯೋಗ, ಮಹಿಳಾ ಆಯೋಗ, ಕುಟುಂಬ ಆಯೋಗ ಮತ್ತು ಬೆಥನಿ ಲೇ ಅಸೋಸಿಯೇಶನ್‌ ನ ಸಹಯೋಗದಲ್ಲಿ ವಿಶಿಷ್ಟ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೇ 4 ರಂದು ನಡೆಯಿತು. ಸ್ಥಳೀಯ ಜನ ಸಮುದಾಯಕ್ಕೆ ಮೂಲಭೂತ ವೈದ್ಯಕೀಯ ಸೇವೆಗಳನ್ನು ಒದಗಿಸುವುದು ಹಾಗೂ ಆರೋಗ್ಯ ಜಾಗೃತಿ ಮೂಡಿಸುವುದು ಮತ್ತು ಸಾಮಾನ್ಯ ಕಾಯಿಲೆಗಳ ಆರಂಭಿಕ ರೋಗ ನಿರ್ಣಯವನ್ನು ಮಾಡುವುದು ಈ ಶಿಬಿರದ ಉದ್ದೇಶವಾಗಿತ್ತು.
ಫಾದರ್ ಮುಲ್ಲರ್ ಮೆಡಿಕಲ್‌ ಕಾಲೇಜು ಮತ್ತು ಚಾರಿಟೆಬಲ್ ಆಸ್ಪತ್ರೆಯ 15 ತಜ್ಞ ವೈದ್ಯರು ಮತ್ತು ಸಿಬಂದಿ ಶಿಬಿರವನ್ನು ನಡೆಸಿಕೊಟ್ಟರು. ಸಾಮಾನ್ಯ ಆರೋಗ್ಯ ತಪಾಸಣೆ (ಬಿಪಿ ಮತ್ತು ಶುಗರ್), ಕಣ್ಣು ತಪಾಸಣೆ, ಮಕ್ಕಳ ರೋಗಗಳು, ಚರ್ಮರೋಗ, ಒಬಿಜಿ, ಇಸಿಜಿ, ಮೂಳೆ ಚಿಕಿತ್ಸೆಗೆ ಸಂಬಂಧಿಸಿ ತಪಾಸಣೆ ನಡೆಸಲಾಯಿತು.
ಫಾದರ್ ಮುಲ್ಲರ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಕೆಲ್ವಿನ್ ಪಾಯ್ಸ್‌ ಮತ್ತು ಶಿಬಿರ ಸಂಯೋಜಕಿ ಡಾ. ಕ್ಯಾರೋಲಿನ್ ಪಾಯ್ಸ್‌ ಅವರ ನೇತೃತ್ವದಲ್ಲಿ ಶಿಬಿರ ಆಯೋಜಿಸಲಾಗಿತ್ತು.
ಕೋರ್ಡೆಲ್‌ ಚರ್ಚ್ ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಆಶೀರ್ವದಿಸಿದರು ಹಾಗೂ ಚರ್ಚ್ ಉಪಾಧ್ಯಕ್ಷೆ ರೂತ್ ಕ್ಯಾಸ್ಟೆಲಿನೊ, 21 ಆಯೋಗಗಳ ಸಂಯೋಜಕ ಡಾಲ್ಫಿ ಡಿ’ಸೋಜಾ ಮತ್ತು ಆಯೋಗಗಳ ಪ್ರಮುಖರು ಮತ್ತು ಸ್ವಯಂಸೇವಕರ ಸಮ್ಮುಖದಲ್ಲಿ ಶಿಬಿರವನ್ನ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಆರೋಗ್ಯವು ಒಂದು ಹೂಡಿಕೆ, ಅದೊಂದು ವೆಚ್ಚವಲ್ಲ ಎಂದು ಹೇಳಿದರು. ಜೀವನ್‌ ಧಾರಾ ಕೇಂದ್ರದ ನಿರ್ದೇಶಕಿ ಸಿಸ್ಟರ್‌ ರೀನಾ ಜೂಲಿಯೆಟ್ ಉಪಸ್ಥಿತರಿದ್ದರು. 300 ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು. ಹಲವರಿಗೆ ಸಣ್ಣಪುಟ್ಟ ಕಾಯಿಲೆಗಳು ಇರುವುದು ಪತ್ತೆಯಾಗಿದ್ದು, ಅಗತ್ಯ ಔಷಧಿಗಳನ್ನು ನೀಡಲಾಯಿತು. ಉಚಿತ ವೈದ್ಯಕೀಯ ಸೇವೆಗಳಿಗೆ ಫಲಾನುಭವಿಗಳು ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಭವಿಷ್ಯದಲ್ಲಿ ನಿಯಮಿತ ಶಿಬಿರಗಳನ್ನು ನಡೆಸ ಬೇಕೆಂದು ವಿನಂತಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top