ಚೆಂಡೆ :ಹಿರಿಯ ಯಕ್ಷಗಾನ ಕಲಾವಿದರಾದ ವಿಷ್ಣುಶರ್ಮ ವಾಟೆಪಡ್ಪು ಹಾಗೂ ಚಂದ್ರಹಾಸ ತುಂಬೆ ಇವರಿಗೆ ಸನ್ಮಾನ.

106.7K Views 25 May 2025

ಬಂಟ್ವಾಳ :ಹಿರಿಯ ಯಕ್ಷಗಾನ ಕಲಾವಿದ ಕೀರ್ತಿಶೇಷ ಪುಳಿಂಚ ರಾಮಯ್ಯ ಶೆಟ್ಟಿಯವರ ಸುಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಇವರ ಸೇವಾ ರೂಪವಾಗಿ ಮೇ 23ರಂದು ಶುಕ್ರವಾರ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಲ್ಲುರ್ಟಿ ದೇವಸ್ಥಾನದ ವಠಾರದಲ್ಲಿ ಶ್ರೀ ಕಟೀಲು ಮೇಳದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ವಿಷ್ಣುಶರ್ಮ ವಾಟೆಪಡ್ಪು ಹಾಗೂ ಚಂದ್ರಹಾಸ ತುಂಬೆ ಇವರನ್ನು ಗಣ್ಯ ಅಥಿತಿಗಳ ಸಮಕ್ಷಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಾರಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮುಕ್ತೇಸರರಾದ ರತ್ನಾಕರ ಶೆಟ್ಟಿ ಮೂಡಯೂರು, ಬಾಳ್ತಿಲ ಗ್ರಾ ಪಂ ಅಧ್ಯಕ್ಷ ಚಂದ್ರಶೇಖರ ಪೂಜಾರಿ,ಹಿರಿಯ ವಕೀಲರಾದ ಜಗದೀಶ ಶೇಣವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


ಪ್ರತಿಭಾ ಶ್ರೀಧರ ಶೆಟ್ಟಿ ಹಾಗೂ ಮನೆಯವರ, ಕಲಾಭಿಮಾನಿಗಳ ಗೌರವ ಉಪಸ್ಥಿತಿಯಲ್ಲಿ ಕಲಾವಿದರನ್ನು ಶಾಲು ಫಲಪುಷ್ಪ ಸ್ಮರಣಿಕೆ ಗೌರವನಿಧಿಯೊಂದಿಗೆ ಸನ್ಮಾನಿಸಲಾಯಿತು.
ಯಕ್ಷಗಾನ ಸಂಘಟಕ ಬಿ ಜನಾರ್ದನ ಅಮುಂಜೆ ಕಾರ್ಯಕ್ರಮ ನಿರೂಪಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top