ಬ್ರಹ್ಮರಕ್ಕಸೆ ತುಳು ನಾಟಕದ ಪೋಸ್ಟರ್ ಬಿಡುಗಡೆ

108.5K Views 5 Jun 2025

ಮಂಗಳೂರು: ನಾಟಕಗಳು ಅಥವಾ ರಂಗಭೂಮಿ ಹೊಸ ದೃಷ್ಟಿಕೋನದತ್ತ ತೆರೆದುಕೊಂಡಾಗ ಮಾತ್ರ ಅದು ಪ್ರೇಕ್ಷಕನನ್ನ ತಲುಪಲು ಸಾಧ್ಯ ಎಂದು ರಂಗಕರ್ಮಿ, ನಾಟಕ ರಚನೆಕಾರ,ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಹೇಳಿದರು.
ಅವರು ತ್ರಿನೇತ್ರ ಕಲಾವಿದರು ಮಂಗಳೂರು ಅಭಿನಯಿಸುವ ಬ್ರಹ್ಮರಕ್ಕಸೆ ತುಳು ನಾಟಕದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.
ನಾಟಕಕಾರ ಶಶಿ ರಾಜ್ ಕಾವೂರು, ಯಶವಂತ ಬೋಳೂರೂ, ಪರಮಾನಂದ ಸಾಲ್ಯಾನ್ ಸಸಿಹಿತ್ಲು, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷುದ್ರ ಶಕ್ತಿಯೊಂದರ ಕಥೆಯಾಧರಿಸಿಕೊಂಡಿರುವಂಹ ಬ್ರಹ್ಮ ರಕ್ಕಸೆ ಭಯಾನಕ ನಾಟಕ ವಿಭಿನ್ನವಾದಂತ ರಂಗ ಸಜ್ಜಿಕೆ, 3ಡಿ ಪರಿಕಲ್ಪನೆ ಯೊಂದಿಗೆ ರಂಗಭೂಮಿಗೆ ಬರಲಿದೆ. ತ್ರಿನೇತ್ರ ಕಲಾವಿದರು ಮಂಗಳೂರು ನಾಟಕವನ್ನು ಅಭಿನಯಿಸುತ್ತಿದ್ದು, ಕಥೆ ಸಾಹಿತ್ಯ ಸಂಭಾಷಣೆ ಪರಿಕಲ್ಪನೆ ನಿರ್ದೇಶನವನ್ನು ನರೇಶ್ ಕುಮಾರ್ ಮಾಡಿದ್ದು ಭಾಸ್ಕರ್ ಸಸಿಹಿತ್ಲು ಸಾರಥ್ಯದಲ್ಲಿ ಸಂಜೀತ್ ಚಿತ್ರಾಪುರ ಇವರ ನಿರ್ಮಾಣ ನಿರ್ವಹಣೆಯಲ್ಲಿ ಬ್ರಹ್ಮರಕ್ಕಸೆ ರಂಗಭೂಮಿಗೆ ಬರಲಿದ್ದು ಒಂದು ವಿಭಿನ್ನ ಪ್ರಯೋಗ ಎನಿಸಿಕೊಳ್ಳಲಿದೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top