ಪ್ಲಾಸ್ಟಿಕ್ ತ್ಯಾಜ್ಯ ಪರಿಸರಕ್ಕೆ ಮಾರಕ -ಆರ್.ಕೆ.ನಾಯರ್

98.3K Views 5 Jun 2025

ಮಂಗಳೂರು,ಜೂ.5: ಅತಿಯಾದ ಪ್ಲಾಸ್ಟಿಕ್ ಬಳಸುವುದರಿಂದ ಉಂಟಾಗುತ್ತಿರುವ ತ್ಯಾಜ್ಯ ನಮ್ಮ ಸುತ್ತಮುತ್ತಲಿನ ಪರಿಸರದೊಂದಿಗೆ ಸೇರಿ ಸಮಸ್ತ ಜೀವ ಸಂಕುಲಕ್ಕೆ ಹಾನಿ ಯುಂಟು ಮಾಡುತ್ತಿದೆ ಈ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಓಫ್ ಇಂಡಿಯಾ ಆರ್.ಕೆ. ನಾಯರ್ ತಿಳಿಸಿದ್ದಾರೆ.
ಬಲ್ಮಠ ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜುನಲ್ಲಿ ಅರಣ್ಯ ಇಲಾಖೆ, ಮಂಗಳೂರು, ಪರಿಸರ ಅಧ್ಯಯನ ಕೇಂದ್ರ ಹಾಗೂ ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕೃಷಿ ಚಟುವಟಿಕೆ ಯಲ್ಲಿ ರಾಸಾಯನಿಕ ಬಳಕೆ ಮಾಡುವುದರಿಂದ ಪರಿಸರದ ಮೇಲೆ ಬಹಳಷ್ಟು ಹಾನಿ ಉಂಟಾಗುತ್ತಿದೆ. ರಾಸಾಯನಿಕ ಬಳಕೆ ಸಂಪೂರ್ಣ ನಿಲ್ಲಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಹಾಯಕ ವಲಯ ಅರಣ್ಯಧಿಕಾರಿ ಮೋಹನ್, ಉದ್ಯಮಿ ರಮೇಶ್ ನಾಯಕ್, ಲೆಕ್ಕ ಪರಿಶೋಧಕ ಎಸ್. ಎಸ್. ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನಿಯೋಜಿತ ಅಧ್ಯಕ್ಷ ಭಾಸ್ಕರ್ ರೈ, ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜುನ ವನಿತಾ ದೇವಾಡಿಗ, ರೆಡ್ ಕ್ರಾಸ್ ಸೊಸೈಟಿ ಸದಸ್ಯ ಪುಷ್ಪರಾಜ್ ಬಿ ಎನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top