ರೋಟರಾಕ್ಟ್ ಜಿಲ್ಲಾಮಟ್ಟದ ವಾರ್ಷಿಕ ರಸಪ್ರಶ್ನೆ ಸ್ಪರ್ಧಾಕೂಟ

98.2K Views 7 Jun 2025

ಮಂಗಳೂರು: ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಮತ್ತು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ.ರೋ. ಶಾಂತಾರಾಮ್ ವಾಮಂಜೂರು ಸ್ಮಾರಕ 19ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ನೇತೃತ್ವದಲ್ಲಿ ಶನಿವಾರ ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಜರುಗಿತು.
ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯನ್ನು ಪ್ರತಿನಿಧಿಸಿದ ರೋ.ಸಾತ್ವಿಕ್ ಕೊಟೆಕಾರ್ ಮತ್ತು ರೋ.ಶಮನ್ ಜೋಡಿ ತಂಡ ಪ್ರಥಮ ಸ್ಥಾನ ಗಳಿಸಿತು. ರೋಟರಾಕ್ಟ್ ಕ್ಲಬ್ ವನಚೈತನ್ಯ, ಬೆಂಗಳೂರು ಸಂಸ್ಥೆಯನ್ನು ಪ್ರತಿನಿಧಿಸಿದ ರೋ. ಶ್ರೀಖರ್ ದ್ವಿತೀಯ ಸ್ಥಾನ ಪಡೆದರು.
ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ದಿವಂಗತ ಸಹೋದರ ರೋ.ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ಧಾಕೂಟವನ್ನು ಆಯೋಜಿಸುವ ರೋಟರಾಕ್ಟ್ ಸಂಸ್ಥೆಯ ನಿಸ್ವಾರ್ಥ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ರೋಟರಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಪ್ರಶಸ್ತಿ ಪ್ರಮಾಣ ಪತ್ರ ಪ್ರದಾನ ಮಾಡಿ ಅವರ ಸಾಧನೆಯನ್ನು ಅಭಿನಂದಿಸಿದರು.
ಅಂತಾರಾಷ್ಟ್ರೀಯ ರೋಟರಾಕ್ಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಗುಂಟೂರು ನಗರದ ರೋ.ರವಿ ವಡ್ಲಮಣಿಯವರು ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದರು.
ರೋಟರಾಕ್ಟ್ ಜಿಲ್ಲಾ ಚುನಾಯಿತ ಪ್ರತಿನಿಧಿ ಮೈಸೂರು ನಗರ ಮೂಲದ ರೋ. ಪ್ರಜ್ವಲ್, ರೋಟರಾಕ್ಟ್ ದಕ್ಷಿಣ ಏಷ್ಯಾ ಸಂಸ್ಥೆಯ ಅಧ್ಯಕ್ಷ ಡೇರಿಲ್ ಡಿಸೋಜ, ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷ ರೋ.ಭಾಸ್ಕರ್ ರೈ, ವಾಣಿ ವಾಮಂಜೂರ್ ಉಪಸ್ಥಿತರಿದ್ದರು. ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷ ರೋ.ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಮಟ್ಟದ 10 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿತ್ತು. ಈ ಸ್ಪರ್ಧಾಕೂಟವನ್ನು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ನಿರೂಪಿಸಿದರು. ಕಾರ್ಯದರ್ಶಿ ರೋ. ಅಕ್ಷಯ್ ರೈ ವಂದಿಸಿದರು.
ರೋ. ದಿ. ಶಾಂತಾರಾಮ್ ವಾಮಂಜೂರ್‌ರವರು ಸಂಸ್ಥೆಯ ನಿಷ್ಠಾವಂತ ಸದಸ್ಯರಾಗಿದ್ದು, ನಿಸ್ವಾರ್ಥ ಸೇವಾ ಮನೋಭಾವ ಹೊಂದಿದ್ದು, 2006 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಕಸ್ಮಿಕ ವಾಹನ ರಸ್ತೆ ಅಪಘಾತದ ದುರಂತದಲ್ಲಿ ವಿಧಿವಶರಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ವಾರ್ಷಿಕ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವನ್ನು ಆಯೋಜಿಸಲಾಗುವುದು ಎಂದು ಡಾ.ದೇವದಾಸ್ ರೈಯವರು ಮಾಹಿತಿ ನೀಡಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top