ಅಖಿಲ ಭಾರತ ಮಟ್ಟದ ಜೆಎಂಎಂ ಪರೀಕ್ಷೆಯಲ್ಲಿ 34ನೇ ರಾಂಕ್ ಗಳಿಸಿದ ಪೂಜಿತ್ ಕುಲಾಲ್

96.8K Views 7 Jul 2025

ಅಖಿಲ ಭಾರತ ಮಟ್ಟದ ಜೆ ಎಂ ಎಂ ಪರೀಕ್ಷೆಯಲ್ಲಿ 34ನೆ ರಾಂಕ್ ಗಳಿಸಿ ಡೆಲ್ಲಿ ಐ ಐ ಟಿ ಯಲ್ಲಿ ಪ್ರವೇಶ ಪಡೆದ ಪ್ರತಿಭಾವಂತ ಬಾಲಕ ಬಡ ಕುಟುಂಬದ ಪುಟ್ಟ ಹಾಗೂ ವಿನುತಾ ದಂಪತಿಗಳ ಪುತ್ರ ಪೂಜಿತ್ ಕುಲಾಲ್ ರವರನ್ನು ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ವತಿಯಿಂದ ಅಧ್ಯಕ್ಷ ರಾದ ಸೋಮಯ್ಯ ಹನೈನಡೆ ನೇತೃತ್ವದಲ್ಲಿ ಶಾಲು ಸ್ಮರಣಿಕೆ ಫಲ ಪುಷ್ಪ ನೀಡಿ ಹಾರ ಹಾಕಿ ಸನ್ಮಾನಿಸಿ ಸಹಾಯ ಧನ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು ಇಂತಹ ಪ್ರತಿಭಾವಂತ ಬಾಲಕರನ್ನು ಗುರುತಿಸಿ ಸನ್ಮಾನಿಸುವುದು ನಮ್ಮಸಂಘಕ್ಕೆ ಹೆಮ್ಮೆ ಹಾಗೂ ಆತನಿಗೆ ಮುಂದಿನ ಭವಿಷ್ಯಕ್ಕೆ ಸ್ಫೂರ್ತಿ ಎಂದು ಅಭಿಪ್ರಾಯಪಟ್ಟು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಸೋಮಪ್ಪ ಬಂಗೇರ, ಶ್ರೀನಿವಾಸ ಕುಲಾಲ್, ಶ್ರೀಮತಿ ರೋಹಿಣಿ, ಶೀನ ಟೈಲರ್ ಅಲ್ಲಿಪ್ಪಾದೆ, ಕಿಟ್ಟು ಮೂಲ್ಯ,ನೀಲಪ್ಪ ಸಾಲಿಯಾನ್, ಶ್ರೀಮತಿ ರತ್ನಾವತಿ, ವಿಠ್ಠಲ ಮೂಲ್ಯ, ದಿನಕರ ಎಂ.,ರಾಮ ಮರ್ದೋಳಿ, ಶ್ರೀಮತಿ ಶಾಂಭವಿ ಹಾಗೂ ಸದಸ್ಯರಾದ ಭಾಸ್ಕರ್ ಕೊಲ್ನಾಡು ಶ್ರೀಮತಿ ಗುಣವತಿ ಮತ್ತು ಬಾಲಕನ ತಾಯಿ ಶ್ರೀಮತಿ ವಿನುತಾ ಉಪಸ್ಥಿತರಿದ್ದರು. ಗೌರವಾಧ್ಯಕ್ಸರಾದ ಶೇಷಪ್ಪ ಮಾಸ್ಟರ್ ನಿರ್ವಹಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top