ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿ ಮಂಗಳೂರು ಜಂಟಿ ಆಶ್ರಯದಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಜುಲೈ 9 ಶನಿವಾರ ಮಹರ್ಷಿ ವಾಲ್ಮೀಕಿ ಸಭಾಂಗಣದಲ್ಲಿ ನಡೆಯಿತು. 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು. ಮಹರ್ಷಿ ವಾಲ್ಮೀಕಿ ವಸತಿ ಶಾಲೆ. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನೀತಾರವರು ವಹಿಸಿದ್ದರು. ಮುಖ್ಯಸಂಪನ್ಮೂಲ ಅತಿಥಿಗಳಾಗಿ. ಕರಾವಳಿ ಡೈಲಿ ನ್ಯೂಸ್ ಚೀಪ್ ಎಡಿಟರ್ ಮಹೇಶ್ ಕನ್ನೇಶ್ವರ ಹಿರಿಯ ಬರಹಗಾರರಾದ ಸುಬ್ರಾಯ ಭಟ್, ದೂರದರ್ಶನ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರರಾದ. ರಾಜೇಶ್ ದಡ್ಡಂಗಡಿ, ಶಾಲೆಯ ಮೇಲ್ವಿಚಾರಕಿ ಸರಸ್ವತಿ ಉಪಸ್ಥಿತರಿದ್ದರು. ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು. ಸ್ವಾಗತಿಸಿದರು ಲೇಖಕಿ ಶಿಕ್ಷಕಿ ನಿರ್ಮಲ ಉದಯಕುಮಾರ್ ವಂದಿಸಿದರು.





















































































































































































