ಕೆಲರಾಯ್‌ ಸೈಂಟ್‌ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’

117.5K Views 5 Sep 2025

ಮಂಗಳೂರು: ಮಂಗಳೂರಿನ ಕೆಲರಾಯ್‌ ಸೈಂಟ್‌ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’ ಕಾರ್ಯಕ್ರಮ ಆಗಸ್ಟ್ 31 ರಂದು ಭಾನುವಾರ ನಡೆಯಿತು.
ಕೆಲರಾಯ್‌ ಚರ್ಚ್ ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ಕೋಸ್ತಾ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಭಾಷೆಯನ್ನು ಮನೆಯಲ್ಲಿ ಮಾತನಾಡುವ ಮೂಲಕ ಉಳಿಸಿ ಬೆಳೆಸ ಬೇಕು. ಮುಂದಿನ ಪೀಳಿಗೆಗೆ ಹಸ್ತಾಂತರಿಸ ಬೇಕು ಎಂದು ಕರೆ ನೀಡಿದರು.
ಕೊಂಕಣಿ ಸಾಹಿತಿ ಹಾಗೂ ಶಿಕ್ಷಕ ಫ್ರಾನ್ಸಿಸ್‌ ಡಿ’ಕುನ್ಹಾ, ಫೋರ್‌ ವಿಂಡ್ಸ್‌ ನಿರ್ದೇಶಕ ಎಲಿಯಾಸ್ ಫೆರ್ನಾಂಡಿಸ್‌, ಕೆಲರಾಯ್‌ ಚರ್ಚ್ ನ ವಾಸ್ತವ್ಯ ಧರ್ಮಗುರು ವಂದನೀಯ ಫಾ. ರೋಶನ್ ಫೆರ್ನಾಂಡಿಸ್, ಚರ್ಚ್ ಉಪಾಧ್ಯಕ್ಷ ಸಂತೋಷ್‌ ಡಿ’ಕೋಸ್ತಾ, ಕಾರ್ಯದರ್ಶಿ ಸೆಲಿನ್ ಡಿ’ಮೆಲ್ಲೊ, ಫಾತಿಮಾ ಕಾನ್ವೆಂಟಿನ ಸುಪೀರಿಯರ್ ಭಗಿನಿ ಐರಿನ್‌ ರೊಡ್ರಿಗಸ್, ಆರೋಗ್ಯ ಮಾತಾ ಕಾನ್ವೆಂಟಿನ ಸುಪೀರಿಯರ್‌ ಭಗಿನಿ ಝೀಜಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 40 ಮಕ್ಕಳಿಂದ ಕೊಂಕಣಿಯ ವಿವಿಧ ಸಮುದಾಯಗಳ ವಸ್ತ್ರ ಧಾರಣೆ ಪ್ರದರ್ಶನ, 10 ಕುಟುಂಬಗಳಿಂದ ಕೊಂಕಣಿ ಪುಸ್ತಕ ಪ್ರದರ್ಶನ, ನಾಲ್ಕು ತಂಡಗಳಿಂದ ಕೊಂಕಣಿ ಸಮುದಾಯಗಳ ಜನರು ಮನೆಯಲ್ಲಿ ಬಳಸುವ ಹಳೆಯ ಸಾಧನಗಳ ಪ್ರದರ್ಶನ, 14 ತಂಡಗಳಿಂದ ಕೊಂಕಣಿ ಗೀತೆಗಳ ಗಾಯನ, 9 ತಂಡಗಳಿಂದ ಕೊಂಕಣಿ ನೃತ್ಯ ಪ್ರದರ್ಶನ ನಡೆಯಿತು. ಕೊನೆಯಲ್ಲಿ ಸಾಂಪ್ರದಾಯಿಕ ಭೋಜನದ ವ್ಯವಸ್ಥೆ ಇತ್ತು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top