ಮಿಥುನ್ ರೈ ಅವರ ಸಮಾಜ ಸ್ಪಂದನೆಯೇ ಸ್ಪೂರ್ತಿ: ಅಶೋಕ್ ಪೂಜಾರ್

118K Views 5 Oct 2025

ಮೂಲ್ಕಿ: ಸಮಾಜದ ಎಲ್ಲ ವರ್ಗದ ಜನರೊಂದಿಗೆ ಸದಾ ಬೆರೆತು ಸಾಮಾಜಿಕ ಸ್ಪಂದನೆ ನೀಡುವ ಯುವನೇತಾರ ಮಿಥುನ್ ರೈ ಅವರೇ ನಮಗೆ ಸ್ಪೂರ್ತಿಯಾಗಿದ್ದು ಅವರ ಹುಟ್ಟು ಹಬ್ಬದ ದಿನದಂದು ಸಮಾಜದ ಚಿಂತನೆ ಮಾಡುವ ಅವಕಾಶ ನಮಗೆಲ್ಲರಿಗೂ ಸಿಕ್ಕಿದೆ ಎಂದು ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಅಶೋಕ್ ಪೂಜಾರ್ ಹೇಳಿದರು. ಅವರು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಣ್ಣು ಹಂಪಲನ್ನು ವಿತರಿಸಿ ಮಾತನಾಡಿದರು
ಆಸ್ಪತ್ರೆಯ ಡಾ. ಜತ್ತನ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂಬಾರ್, ಮೂಲ್ಕಿ ನಗರ ಪಂಚಾಯತ್ ಸದಸ್ಯ ಪುತ್ತುಬಾವ, ರಕ್ಷಿತ್ ಪೂಜಾರಿ ಕೊಳಚಿಕಂಬಳ, ಕಿರಣ್ ಶೆಟ್ಟಿ ಕೆರೆಮನೆ, ದೀಕ್ಷಿತ್ ಪೂಜಾರಿ ಮತ್ತಿತರರು ಇದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top