ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ “ನವಗ್ರಹ ಶಾಂತಿ ಹೋಮ”

113.9K Views 2 Dec 2025

ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಬುಧವಾರ ದಿನಾಂಕ 26-11-2025 ರಂದು ನವಗ್ರಹ ಶಾಂತಿ ಹೋಮವು ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಅಮ್ಮನ ಆಶ್ರಮದ ಹಿರಿಯ ಸನ್ಯಾಸಿ ಶಿಷ್ಯೆಯರು ಈ ವಿಶೇಷ ಹೋಮದ ಪೂಜಾ ವಿಧಾನಗಳನ್ನು ನೆರವೇರಿಸಿದರು.


ಮಂಗಳೂರಿನ ಆಶ್ರಮದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ, ಹೈದರಾಬಾದ್ ಮಠದಲ್ಲಿರುವ ಹಾಗೂ ತೆಲಂಗಾಣ, ಆಂದ್ರಪ್ರದೇಶದ ಜವಾಬ್ದಾರಿ ಹೊಂದಿರುವ ಸ್ವಾಮಿನಿ ಸುವಿದ್ಯಾಮೃತ ಪ್ರಾಣ, ಕೊಟ್ಟಾಯಂ ಆಶ್ರಮದ ನಿಷ್ಟಾಮೃತ ಪ್ರಾಣ ಹಾಗೂ ಕಾರವಾರದಿಂದ ಸ್ವಾಮಿನಿ ಅಮಲಾಮೃತ ಪ್ರಾಣ ರವರು ಜೊತೆಯಾಗಿ ಸೇರಿ ಆಶ್ರಮದ ವಿಧಿವಿಧಾನಗಳ ಅನುಸಾರ ಪೂಜೆಗೈದರು.


ಸೇವಾ ಸಮಿತಿಯ ಗೌರವಾಧ್ಯಕ್ಷರುಗಳಾದ ಡಾ.ಜೀವರಾಜ್ ಸೊರಕೆ,ಡಾ.ವೈ.ಸನತ್ ಹೆಗ್ಡೆ, ಶ್ರುತಿ ಸನತ್ ಹೆಗ್ಡೆ, ಅಧ್ಯಕ್ಷರಾದ ಸುರೇಶ್ ಅಮೀನ್ ಮತ್ತು ಪದಾಧಿಕಾರಿಗಳು, ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಉಡುಪಿ ಸೇವಾಸಮಿತಿಯ ಅಧ್ಯಕ್ಷ ಯೋಗೀಶ್ ಬೈಂದೂರು, ನವೀನ್ ಪಿವಿಟಿ, ಕುಂದಾಪುರ ಸಮಿತಿಯ ಕಲ್ಪನಾ ಭಾಸ್ಕರ್, ಮಾಲತಿ ಬಂಗೇರ ಹಾಗೂ ಕರಾವಳಿ ಕರ್ನಾಟಕದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಅಮ್ಮನ ಭಕ್ತರು ಭಾಗವಹಿಸಿದ್ದರು.
ಯುವ ಉದ್ಯಮಿ ಶರಣ್ ರಾಜ್ ಮತ್ತು ಭರತ್ ಹೊಸಬೆಟ್ಟು ರವರನ್ನು ಸನ್ಮಾನಿಸಲಾಯಿತು.


ಅತಿಥಿಯಾಗಿ ಆಗಮಿಸಿದ ವಿ4 ಮೀಡಿಯ ಮಾಲಕರಾದ ಲಕ್ಷ್ಮಣ್ ಕುಂದರ್ ಮತ್ತು ಖ್ಯಾತ ಚಿತ್ರನಟ ಅರ್ಜುನ್ ಕಾಪಿಕಾಡ್ ರವರಿಗೆ ಸ್ವಾಮಿನಿ ಮಂಗಳಾಮೃತ ಪ್ರಾಣ ರವರು ಗೌರವ ಪ್ರಸಾದ ನೀಡಿದರು.
ಆಗಮಿಸಿದ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಯಿತು.ಈ ಶುಭ ಸಂದರ್ಭದಲ್ಲಿ
ನೂತನ ಪಾರ್ಕಿಂಗ್ ಪ್ರದೇಶದ ಉದ್ಘಾಟನೆ ನೆರವೇರಿಸಲಾಯಿತು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top