ಸಿದ್ದಕಟ್ಟೆ ಸಹಕಾರ ಸಂಘಕ್ಕೆ 5.70 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತ ಬಿಡುಗಡೆ :ಪ್ರಭಾಕರ ಪ್ರಭು

108.7K Views 9 Dec 2025

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ 2024-25 ನೇ ಸಾಲಿಗೆ ಸಂಬಂಧಿಸಿದಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ 1771 ರೈತರ 2037 ಎಕ್ರೆ ಅಡಿಕೆ ಬೆಳೆಗೆ ಅಂದಾಜು ಒಟ್ಟಿಗೆ 5.70 ಕೋಟಿ ವಿಮಾ ಪರಿಹಾರ ಬಿಡುಗಡೆಗೊಂಡಿದ್ದು ಹಂತ ಹಂತವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ ಎಂದೂ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2024- 25 ನೇ ಸಾಲಿನಲ್ಲಿ ಸಂಘದ ವ್ಯಾಪ್ತಿಯ ರೈತರು ಒಟ್ಟಿಗೆ 53 ಲಕ್ಷ ವಿಮೆ ಪ್ರಿಮಿಯಂ ಪಾವತಿಸಿದ್ದು ಗ್ರಾಮವಾರು ಬಿದ್ದ ಮಳೆಯ ಪ್ರಮಾಣ ಹಾಗೂ ಹವಾಮಾನ ವೈಫರಿತ್ಯದ ಆಧಾರದಲ್ಲಿ ಪರಿಹಾರ ಮೊತ್ತ ನಿಗದಿಯಾಗುತ್ತಿದ್ದು ಸಿದ್ದಕಟ್ಟೆ ಸಂಫದ ವ್ಯಾಪ್ತಿಯಲ್ಲಿ 28 ಸಾವಿರ ದಿಂದ 30 ಸಾವಿರವರೆಗೂ ಪರಿಹಾರ ಬಿಡುಗಡೆ ಗೊಂಡಿರುತ್ತದೆ. ಈ ಕುರಿತು ಪ್ರಿಮಿಯಂ ಪಾವತಿಸಿದ ರೈತರು ತಮ್ಮ ಬ್ಯಾಂಕ್ ಖಾತೆಯನ್ನು ಪರೀಕ್ಸಿ ಸಬಹುದಾಗಿದೆ ಎಂದೂ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top