ಗಣರಾಜ್ಯೋತ್ಸವ ಭಾರತೀಯರಿಗೆ ಸ್ವಾಭಿಮಾನ, ಘನತೆ ತಂದು ಕೊಟ್ಟ ದಿನ— ದಿನಕರ ಡಿ. ಬಂಗೇರ

116.7K Views 26 Jan 2026

ಯೂತ್ ಕ್ಲಬ್ ಕೋಡಿಕಲ್ ಆಶ್ರಯದಲ್ಲಿ 77 ನೇ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವವನ್ನು ಮಂಗಳೂರಿನ ಕೋಡಿಕಲ್ ಯೂತ್ ಕ್ಲಬ್ ಆವರಣದಲ್ಲಿ 26/01/2026 ರಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು.


ಕಾರ್ಯಕ್ರಮವನ್ನು ತ್ರಿವರ್ಣ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದ NSCDF ಪ್ರಧಾನ ಕಾರ್ಯದರ್ಶಿ ದಿನಕರ್ ಡಿ.ಬಂಗೇರ ಮಾತನಾಡಿ, ಇಂದು ನಮ್ಮ ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ದಿನ, ಇಂದು ಪ್ರಜಾಪ್ರಭುತ್ವ ಸಾರಿದ ದಿನ, ಭಾರತದ ಎಲ್ಲಾ ರಾಜ್ಯಗಳನ್ನು ಒಂದೇ ಚೌಕಟ್ಟಿನಲ್ಲಿ ಸೇರಿಸಿದ ಮಹತ್ವದ ದಿನ, ಗಣರಾಜ್ಯೋತ್ಸವ ಭಾರತೀಯರಿಗೆ ಸ್ವಾಭಿಮಾನ, ಘನತೆ, ಸಮಾನತೆ ಅಧಿಕೃತವಾಗಿ ತಂದುಕೊಟ್ಟ ದಿನ ಎಂದು ಹೇಳಿದ ಅವರು ಈ ದಿನವನ್ನು ಭಾರತೀಯಾರೆಲ್ಲರೂ ಶ್ರದ್ದೆ ಭಕ್ತಿಯಿಂದ ಆರಾಧಿಸಬೇಕಾದ ದಿನ, ಇಂತಹ ಮಹತ್ವ ಪೂರ್ಣ ಕಾರ್ಯಕ್ರಮದಲ್ಲಿ ಭಾಗವಹಿಸುವ ನಾವೆಲ್ಲರೂ ಧನ್ಯರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯೂತ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಪುತ್ರನ್ ಕೋಡಿಕಲ್ ಮತ್ತು ಪ್ರಧಾನ ಕಾರ್ಯದರ್ಶಿ ಶಶಿಧರ್ ಅಮೀನ್ ಕೋಡಿಕಲ್ ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top