ಮಹಾರಾಷ್ಟ: ಮಹಾರಾಷ್ಟ್ರ ಇಲ್ಲಿನ ಬಾರಾಮತಿ ಬಳಿ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತ ಸಂಭವಿಸಿ ವಿಮಾನದಲ್ಲಿದ್ದ ಮಹಾರಾಷ್ಟ್ರದ ಪ್ರಭಾವಿ ನಾಯಕ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ (66 ವರ್ಷ) ಸಹಿತ 5 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ವಿಮಾನದಲ್ಲಿದ್ದ ಅಜಿತ್ ಪವರ್, ಇಬ್ಬರು ಪಿ.ಎ.ಗಳು, ಮತ್ತು ವಿಮಾನ ಪೈಲಟ್ ಸೇರಿದ್ದಾರೆ. ಮೃತದೇಹವನ್ನು ಬಾರಾಮತಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ನಾಳೆ ಅಂತ್ಯಸಂಸ್ಕಾರ ನಡೆಯಲಿದೆ.



ಇಂದು ಬೆಳಿಗ್ಗೆ 8.30ಕ್ಕೆ ಮುಂಬಯಿಯಿಂದ ಹೊರಟ ವಿಮಾನ 9.12ಕ್ಕೆ ಬಾರಾಮತಿ ಬಳಿ ತಲುಪುತ್ತಿದ್ದಂತೆಯೇ ದಟ್ಟ ಮಂಜು ಮುಸುಕಿದ ವಾತಾವರಣವಿದ್ದ ಕಾರಣದಿಂದಾಗಿ ರನ್ ವೇ ಯಿಂದ ಸ್ವಲ್ಪವೇ ದೂರದಲ್ಲಿದ್ದ ವಿಮಾನ ಭೂ ಸ್ಪರ್ಶ ಮಾಡಲಾಗದೆ ಲ್ಯಾಡಿಂಗ್ ವೇಳೆ ಅಪಘಾತ ಘಟಿಸಿ ಈ ದುರಂತ ಸಂಭವಿಸಿದೆ. ಬಾರಾಮತಿಯಲ್ಲಿ ಚುನಾವಣಾ ಪ್ರಚಾರದ 2-3 ಕಡೆಗಳಲ್ಲಿ ಭಾಗವಹಿಸಬೇಕಾಗಿತ್ತು. ಅದಕ್ಕಾಗಿ ಅಜಿತ್ ಪವರ್ ಅವರು ಈ ನತದೃಷ್ಟ ವಿಮಾನದಲ್ಲಿ ತೆರಳಿದ್ದರು. ಆದರೆ, ಅಪಘಾತ ಸಂಭವಿಸಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ.ಈ ವಿಮಾನ ಅಪಘಾತಕ್ಕೆ ನಿರ್ದಿಷ್ಟ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಈ ಅಪಘಾತ ಹೇಗೆ ಸಂಭವಿಸಿದೆ ಇದಕ್ಕೆ ಕಾರಣಗಳು ಏನು? ಎಂಬುದರ ಬಗ್ಗೆ ತನಿಖೆಯಿಂದ ಇನ್ನಷ್ಟೇ ಗೊತ್ತಾಗಬೇಕಾಗಿದೆ. ಬ್ಲ್ಯಾಕ್ ಬಾಕ್ಸ್ ನ ಮೂಲಕ ನಿರ್ದಿಷ್ಟ ಕಾರಣವನ್ನು ತಿಳಿಯಲು ಪ್ರಯತ್ನ ಪಡಲಾಗುತ್ತಿದೆ. ಅಜಿತ್ ಪವರ್ ಅವರ ಈ ದುರಂತ ಸಾವಿಗೆ ಪ್ರಧಾನಿ ಮೋದಿ ಸಹಿತ ಗಣ್ಯಾರನೇಕರು ಸಂತಾಪ ಸೂಚಿಸಿದ್ದಾರೆ. ಮೋದಿ ಅವರು ಅಜಿತ್ ಪವಾರ್ ಅವರ ತಂದೆ, ಹಿರಿಯ ರಾಜಕಾರಣಿ ಶರದ್ ಪವಾರ್ ಅವರಿಗೆ ಫೋನ್ ಮಾಡಿ ಸಾಂತ್ವನ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ನಿಧನದ ಈ ದಿನ ಕರಾಳ ದಿನ. ಅವರ ಅಗಲುವಿಕೆಯ ಶೋಕವನ್ನು ನನ್ನಿಂದ ತಡೆಯಲಾಗುತ್ತಿಲ್ಲ.ಮಹಾರಾಷ್ಟ್ರದಲ್ಲಿ ಮಹಾನ್ ನಾಯಕರೊಬ್ಬರ ಯುಗಾಂತ್ಯವಾಗಿದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ.
ವಿಮಾನ ದುರಂತದಿಂದ ಅಜಿತ್ ಪವಾರ್,ಅವರ ಇಬ್ಬರು ಪಿಎಗಳು.ಇಬ್ಬರು ವಿಮಾನ ಪೈಲೆಟ್ ಗಳು ಹೀಗೇ ಐದು ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕೃತ ವರದಿ ತಿಳಿಸಿದೆ


ಅಜಿತ್ ಪವಾರ್ ಅವರ ನಿಧನಕ್ಕೆ ಇಂದು ವಿಧಾನಸಭೆಯಲ್ಲಿ ಸ್ಪೀಕರ್ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ ಸಂತಾಪ ಸೂಚಿಸಲಾಯಿತು


























































































































































































