ಯಕ್ಷಧ್ರುವ ಯಕ್ಷಶಿಕ್ಷಣ. ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ. ಯಕ್ಷ ಶಿಕ್ಷಣ  ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ

117.2K Views 16 Mar 2026

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ  ನಡೆಯಿತು.
ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಫಲತೆಯನ್ನು ಸಾಧಿಸಬೇಕು ಎಂದರು.


ಈ‌ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳರು ಕಳೆದ ಶೈಕ್ಷಣಿಕ ವರ್ಷದ ತರಗತಿಯ ಅವಲೋಕನ ಮಾಡಿದರು. ಈ ವೇಳೆ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನೀತಿಸಂಹಿತೆಯನ್ನು ಪ್ರಸ್ತಾಪಿಸಿ ಚರ್ಚಿಸಲಾಯಿತು.
ಪ್ರಸಕ್ತ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ತರಗತಿ, ಯಕ್ಷಗಾನ ಶಿಕ್ಷಕರ ಕಾರ್ಯಗಾರ, ಶಾಲಾ ಸಮಿತಿಯ ಸಭೆ ಸಹಿತ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ಕಾರ್ಯದರ್ಶಿಗಳಾದ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ CA ಸುದೇಶ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಸಹಿತ ವಿವಿಧ ಪದಾಧಿಕಾರಿಗಳು, ಯಕ್ಷಗಾನ ಶಿಕ್ಷಕರು ಉಪಸ್ಥಿತರಿದ್ದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top