ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

109.3K Views 20 May 2026

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿ ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾ0ತರಿಸಿ ದರು.
ಈ ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು ಕೆ ಜಿ ತರಗತಿ ಆರಂಭಿಸಲು ಅಗತ್ಯವಿರುವ ಕೊಠಡಿ ನಿರ್ಮಾಣ ಸೇರಿದಂತೆ ಈ ಶಾಲೆಯ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಿಎಎಸ್ಎಫ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಎಸ್‌ಡಿಎಂಸಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ ಮಾರ್ದೊಟ್ಟು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾಲತಾ, ಗಾಯತ್ರಿ, ಹರ್ಷಿತ್, ಅಮೃತ್ ಕುಮಾರ್ ಪುಟಾಣಿಗಳ ಸಾಹಿತ್ಯ, ಹೃಷಿಕ್, ಹರ್ಷ್, ಅಧ್ವಿನ್ ಉಪಸ್ಥಿತರಿದ್ದರು.

Read More News

Scroll to Top