ಬಂಟ್ವಾಳ: ಮಾಜಿ ಸಚಿವ ಬೆಳ್ಳಿಪ್ಪಾಡಿ ಬಿ. ರಮಾನಾಥ ರೈ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ ಇಂದು (ಸೆ.13, ಭಾನುವಾರ) ಸಂಜೆ 3 ಗಂಟೆಗೆ ಬಿ.ಸಿ. ರೋಡ್ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟುಹಬ್ಬ ಆಚರಣಾ ಸಮಿತಿ, ದಕ್ಷಿಣ ಕನ್ನಡ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು . ನಾಲ್ಕುವರೆ ದಶಕಗಳ ಅವರ ರಾಜಕೀಯ ಅನುಭವ,ಸಾಮಾಜಿಕ ಮತ್ತು ನಿಸ್ವಾರ್ಥ ಜನಸೇವೆಯನ್ನು ಪರಿಗಣಿಸಿ ಈ ಹುಟ್ಟುಹಬ್ಬದ ಸಂಭ್ರಮವನ್ನು ಅಭಿಮಾನಿಗಳು ಆಚರಿಸಿದರು.ಈ ಸಂದರ್ಭದಲ್ಲಿ ರೈಯವರ ಆಪ್ತರಾದ ಪಿಯೂಸ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಎಂ. ಎಸ್. ಮೊಹಮ್ಮದ್,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತ ಗಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ರೈಯವರ ಅಭಿಮಾನಿಗಳು ಉಪಸ್ಥಿತರಿದ್ದರು
ಮಾನವೀಯತೆಯೊಂದಿಗೆ ಹುಟ್ಟುಹಬ್ಬದ ಆಚರಣೆ
ಮಾಜಿ ಸಚಿವ ರಮಾನಾಥ ರೈ ಅಂದರೆ ಅಪಾರ ಅಭಿಮಾನಿಗಳ ಅಚ್ಚುಮೆಚ್ಚಿನ ಬೇಬಿಯಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರಿನ ಪ್ರಜ್ಞಾಶ್ರಮದ ವಿಕಲಚೇತನ ವಿದ್ಯಾರ್ಥಿಗಳಿಗೆ ರೋಶನ್ ರೈ ಅವರು ಇಂದು ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಿದರು.
ಕೇಕ್ ಕತ್ತರಿಸುವ ಸಂಭ್ರಮಕ್ಕೆ ಸೀಮಿತವಾಗದೆ, ಅಶಕ್ತ ಮಕ್ಕಳೊಂದಿಗೆ ಸಂತಸ ಹಂಚಿಕೊಂಡ ಈ ಕಾರ್ಯಕ್ರಮವು ಮಾನವೀಯತೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಯಿತು. “ಸೇವೆಯೇ ಸಂಭ್ರಮ, ಮಾನವೀಯತೆಯೇ ನಿಜವಾದ ಆಚರಣೆ” ಎಂಬ ಸಂದೇಶದೊಂದಿಗೆ ಈ ಕಾರ್ಯಕ್ರಮ ನಡೆಯಿತು.













































































































































































