ಅಮೃತಾನಂದಮಯಿ ಮಠದಲ್ಲಿ ಯೋಗಶಿಬಿರ ಉದ್ಘಾಟನೆ

116.8K Views 20 Feb 2024

ಮಂಗಳೂರು: ನಗರದ ಬೋಳೂರು ಅಮೃತಾನಂದಮಯಿ ಮಠದ ಆಶ್ರಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಬಳಗದವರಿಂದ ಯೋಗತರಬೇತಿ ಶಿಬಿರವನ್ನು ಸೋಮವಾರ ದಿನಾಂಕ 19ರಂದು ಉದ್ಘಾಟಿಸಲಾಯಿತು. ಮಠದ ದೇವಸ್ಥಾನ ಸಮಿತಿ ಸದಸ್ಯರಾದ ಮುರಳೀಧರ್ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶರೀರ ಹಾಗೂ ಮನಸ್ಸಿನ ಸ್ವಾಸ್ಥ್ಯ ರಕ್ಷಣೆಯೊಂದಿಗೆ ದೀರ್ಘಾಯುಷ್ಯ ಹೊಂದಲು ಯೋಗ ಬಹಳ ಸರಳ ವಿಧಾನ. ಗೋಪಾಲಕೃಷ್ಣ ದೇಲಂಪಾಡಿಯವರು ಸಾರ್ವಜನಿಕರ ಹಿತದೃಷ್ಟಿಯಿಂದ ಹಲವಾರು ವರ್ಷಗಳಿಂದ ಶಿಬಿರಗಳನ್ನು ನಡೆಸುತ್ತಿದ್ದಾರೆ. ಅವರ ಈ ಸೇವೆ ಎಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು.

ಪ್ರಾರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತಾಡಿದ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತಕುಮಾರ್ ಪೆರ್ಲ ಅವರು ಮಾತಾ ಅಮೃತಾನಂದಮಯಿ ಮಠವು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯ ಉದ್ದೇಶದಿಂದ ನಡೆಸುತ್ತಿರುವ ಕಾರ್ಯಕ್ರಮಗಳಲ್ಲಿ ಯೋಗವೂ ಪ್ರಮುಖವಾಗಿದೆ. ದೇಲಂಪಾಡಿ ಪ್ರತಿಷ್ಠಾನದ ಜೊತೆಗೆ ನಡೆಸುತ್ತಿರುವ ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದರು.
ಡಾ.ದೇವದಾಸ್ ಪುತ್ರನ್ ವಂದಿಸಿದರು. ಸೇವಾ ಸಮಿತಿಯ ಪದಾಧಿಕಾರಿಗಳಾದ ಭರತ್ ಕುಮಾರ್ ಎರ್ಮಾಳ್, ನಿರಂಜನ್ ಅಡ್ಯಂತಾಯ, ಆಯುಷ್ ವೈದ್ಯಾಧಿಕಾರಿ ಡಾ.ಶ್ರೀದೇವಿ, ಶ್ರೀಮತಿ ವೀಣಾ ಮಾರ್ಲ, ಭಾರತಿ ಎಸ್.ರಾವ್, ಕುಮಾರ್ ಶೆಣೈ, ಸ್ಕಂದ, ದಾಮೋದರ್ , ಹಾಗೂ ಗೋಪಾಲಕೃಷ್ಣ
ದೇಲಂಪಾಡಿಯವರ ಶಿಷ್ಯರು ಮತ್ತು ಅಮ್ಮನ ಭಕ್ತರು ಭಾಗವಹಿಸಿದ್ದರು.ಯೋಗ ತರಬೇತಿಯನ್ನು ಪಡೆಯಲು ಆಸಕ್ತರಿಗೆ ಪ್ರವೇಶಾವಕಾಶ ಇರುತ್ತದೆ. ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ನೋಂದಣಿ ಮಾಡಬಹುದಾಗಿದೆ ಎಂದು ಡಾ.ವಸಂತಕುಮಾರ್ ಪೆರ್ಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top