ಮಂಗಳೂರ: ಎಪ್ರಿಲ್ 27ರ ಶನಿವಾರ ಮಧ್ಯಾಹ್ನ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ ಕ್ಯಾ. ಬೃಜೇಶ್ ಚೌಟ ಅವರು ಈ ಸಲ ಗೆಲುವು ನನ್ನದೇ. ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ ಎಂದು ನುಡಿದರು. ಈ ಸಂದರ್ಭ ಅವರು ತನಗೆ ಸಹಕರಿಸಿದ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ, ಮತದಾರರಿಗೆ, ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸಿದರು. ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪಕ್ಷದ ಜಿಲ್ಲಾ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.



























































































































































































