ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರಿಗೆ ‘ಹೊರನಾಡ ಕನ್ನಡ ರತ್ನ’ ಪ್ರಶಸ್ತಿ.

104.7K Views 24 May 2024

ಮುಂಬಯಿ: ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರು ಹೊರನಾಡ ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಕರ್ನಾಟಕ ಸಂಘ ಆಂಧೇರಿ (ರಿ) ಪ್ರಸ್ತುತ ಪಡಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇವರ ಸಹಯೋಗದಲ್ಲಿ ಜೂನ್ 9ರ ಭಾನುವಾರ ರಾಧಾಬಾಯಿ ಟಿ. ಭಂಡಾರಿ ಸಭಾಗೃಹ, ಬಂಟರ ಭವನ ಕುರ್ಲಾ, ಮುಂಬಯಿಯಲ್ಲಿ ಬೆಳಿಗ್ಗೆ 9.30ರಿಂದ ಆರಂಭವಾಗುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ 2024ರಲ್ಲಿ ಕರ್ನಾಟಕ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಹೇರಂಬ ಇಂಡಸ್ಟ್ರೀಸ್‌ನ ಸಿ.ಎಂ.ಡಿ. ಕನ್ಯಾನ ಸದಾಶಿವ ಶೆಟ್ಟಿ ಮೊದಲಾದ ಗಣ್ಯರ ಸಮ್ಮುಖದಲ್ಲಿ ಡಾ. ಸುಧಾಕರ ಶೆಟ್ಟಿ ಅವರಿಗೆ ಹೊರನಾಡ ಕನ್ನಡ ಪ್ರಶಸ್ತಿ ಸೇರಿದಂತೆ ಹಲವು ಮಂದಿ ಸಾಧಕರಿಗೆ ವಿವಿಧ ಪ್ರಶಸ್ತಿ ಪ್ರದಾನ ನಡೆಯಲಿದೆ.


ಡಾ. ಮೋಹನ್ ಆಳ್ವರ ಸಹಕಾರದೊಂದಿಗೆ ಮೂಡಬಿದ್ರೆಯಲ್ಲಿ ಬೇಬಿ ಫ್ರೆಂಡ್ ಸಂಚಾರಿ ಮಕ್ಕಳ ಕ್ಲಿನಿಕ್‌ನ್ನು ಕಳೆದ ಒಂದು ವರ್ಷದಿಂದ ಆರಂಭಿಸುತ್ತಾ ಬಂದಿರುವ ಕಠಿಣ ಶ್ರಮಿ, ವೈದ್ಯಕೀಯ ಸಮಾಜ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಸುಧಾಕರ ಶೆಟ್ಟಿಯವರು ಪುಣೆಯಲ್ಲಿ ಯಶಸ್ವಿಯಾಗಿ 30 ವರ್ಷಗಳಿಂದ ಬೇಬಿ ಫ್ರೆಂಡ್ ಮಕ್ಕಳ ಕ್ಲಿನಿಕ್ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತ ನಾಮರಾಗಿದ್ದಾರೆ.
ದಿನವಿಡೀ ಮಕ್ಕಳ ಆರೋಗ್ಯ ತಪಾಸಣೆ, ಬಡ ಮಕ್ಕಳಿಗಾಗಿ ಸಾವಿರಾರು ವೈದ್ಯಕೀಯ ಶಿಬಿರಗಳನ್ನು ಸಂಘಟಿಸುತ್ತಾ ಬಂದಿರುವ ಡಾ. ಸುಧಾಕರ ಶೆಟ್ಟಿಯವರು ಕೋವಿಡ್ ಸಂದರ್ಭದಲ್ಲಿ ಕರ್ನಾಟಕ ಮೂಲದ 1,500ಕ್ಕೂ ಹೆಚ್ಚು ರೋಗಿಗಳಿಗೆ ತನ್ನ ಪರಿಣಿತ ವೈದ್ಯಕೀಯ ತಂಡದ ಮೂಲಕ ಗುಣಮುಖಗೊಳಿಸಿದ್ದಾರೆ.
ಡಾ. ಸುಧಾಕರ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ಸತತ 4 ಬಾರಿ ಕೇಂದ್ರ ಸರಕಾರ ಪ್ರತಿಷ್ಠಿತ ಪ್ರಶಸ್ತಿಯಾದ ರಕ್ಷಾ ಮಂತ್ರಿ ಅವಾರ್ಡ್ ದೊರಕಿದೆ.
ಪುಣೆ ಕಂಟೋನ್ಮೆಂಟ್ ಬೋರ್ಡ್ ನಿಂದ ಶ್ರೇಷ್ಠತೆಯ ಪ್ರಮಾಣ ಪತ್ರ ಪ್ರಶಸ್ತಿ,2023ರಲ್ಲಿ ಚಾರ್ ಸಹಿ ಬಜಾಡೆ ಅವಾರ್ಡ್ ಬಂದಿದೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top