ಮಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಜೊತೆಯಾಗೋಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

111.7K Views 22 Jun 2024

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಯುದ್ಧ ಸ್ಮಾರಕವನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿಪಡಿಸಲು ಮಂಗಳೂರಿನ ಪ್ರಥಮ ಪ್ರಜೆ‌ ಮತ್ತು ನಗರದ ಜನಪ್ರತಿನಿಧಿಗಳಿಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಈ ಸಂದರ್ಭದಲ್ಲಿ ಮ.ನ.ಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪ್ರತಿಪಕ್ಷ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಮ.ನ.ಪಾ ಆಯುಕ್ತರಾದ ಆನಂದ್, ಪಾಲಿಕೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಗಣೇಶ್ ಕುಲಾಲ್, ಲೋಹಿತ್ ಅಮೀನ್, ವರುಣ್ ಚೌಟ, ಭರತ್‌ಕುಮಾರ್, ವಿರೋಧ ಪಕ್ಷದ ನಾಯಕ ಪ್ರವೀಣಚಂದ್ರ ಆಳ್ವ, ಮ.ನ.ಪಾ ಸದಸ್ಯರು ಮತು ಅಧಿಕಾರಿಗಳು ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top