ಜೂನ್ 29 ರಂದು ಪಾಲಿಕೆವತಿಯಿಂದ ಕುದ್ಮುಲ್ ರಂಗರಾವ್ ದಿನಾಚರಣೆಯ ಪ್ರಯುಕ್ತ ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

115.5K Views 24 Jun 2024

ಮಂಗಳೂರು: ಜೂನ್ 29ರ ಪೂವಾ೯ಹ್ನದಂದು ಮಹಾನಗರಪಾಲಿಕೆಯ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ಕುದ್ಮುಲ್ ರಂಗ ರಾವ್ ರವರ ದಿನಾಚರಣೆಯನ್ನು ಮಂಗಳೂರು ಮಹಾನಗರಪಾಲಿಕೆಯ ವತಿಯಿಂದ ಆಚರಿಸಲು ನಿಧ೯ರಿಸಲಾಗಿದ್ದು, ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಪೂವ೯ ತಯಾರಿಯ ಕುರಿತು ಚಚಿ೯ಸಲಾಯಿತು. ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲಿಕೆಯ ಉಪಮೇಯರ್ ಸುನೀತ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭರತ್ ಕುಮಾರ್ ಸದಸ್ಯರಾದ ಸಂಧ್ಯಾ ಆಚಾರ್, ಮನೋಜ್ ಕುಮಾರ್ ಮತ್ತು ಮಹಾನಗರಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top