ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈಯವರ ಬಂಟ್ವಾಳದ ಕಳ್ಳಿಗೆ ಮನೆಗೆ ಭೇಟಿ ನೀಡಿದ ಕರ್ನಾಟಕ ಸರಕಾರದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ರೈಯವರನ್ನು ಸನ್ಮಾನಿಸಿದ್ದಲ್ಲದೆ, ರಾಜಕೀಯ ಸುವ್ಯವಸ್ಥೆ ಬಗ್ಗೆ ಚರ್ಚಿಸಿದರು. ರಾಜ್ಯ ರಾಜಕಾರಣದಲ್ಲಿ ರೈಯವರಿಗೆ ಮಹತ್ವದ ಅಧಿಕಾರ ನೀಡಬೇಕೆಂದು ಒತ್ತಾಯಗಳು ಕೇಳಿ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಈಶ್ವರ್ ಖಂಡ್ರೆಯವರ ಭೇಟಿ ಇದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ.


























































































































































































