ವಿನೂತನ ಮಾದರಿಯಲ್ಲಿ ಅರೋಗ್ಯ ಜಾಗ್ರತಿ ಮೂಡಿಸಿದ ಸನ್ನಿಧಿ ಕಶೆಕೋಡಿ ಅವರಿಗೆ ಸ್ಪೀಕರ್ ಖಾದರ್ ಸನ್ಮಾನ

106.7K Views 13 Sep 2024

ಮಂಗಳೂರು, ಸೆಪ್ಟೆಂಬರ್ 12,ವಿನೂತನ ರೀತಿಯಲ್ಲಿ ಮತದಾನ ಜಾಗೃತಿ ಹಾಗೂ ಆರೋಗ್ಯ ಜಾಗೃತಿ ಮತ್ತು ಪರಿಸರ ಸ್ನೇಹಿ ಗಣಪ ಜಾಗೃತಿಯನ್ನು ಮನೆಮನೆ ಹಾಗೂ ಅಂಗಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸಿದ ಸನ್ನಿಧಿ ಕಶೆ ಕೋಡಿ ಬಾಲಕಿಯನ್ನು ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು . ಟಿ ಖಾದರ್ ಅವರು ತಮ್ಮ ಬೆಂಗಳೂರಿನ ವಿಧಾನಸೌಧ ಕೊಠಡಿಯಲ್ಲಿ ಇವಳ ಕೆಲಸ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದಲ್ಲದೆ ಗೌರವಿಸಿದರು ಈ ಸಂದರ್ಭದಲ್ಲಿ ನೀವು ವಿಧಾನಸಭಾ ಅಧ್ಯಕ್ಷರಾಗಿ ಒಳ್ಳೆಯ ರೀತಿ ಕೆಲಸ ಮಾಡುತ್ತಿದ್ದು ಮುಂದೆ ನೀವು ರಾಷ್ಟ್ರಮಟ್ಟದಲ್ಲೂ ಇಂತಹ ಹೆಸರು ಮಾಡಿ ನಮ್ಮ ಊರಿನ ಕೀರ್ತಿ ಪತಾಕೆ ಹಾರಿಸಬೇಕಾಗಿ ಕೇಳಿಕೊಂಡಳು ಇದಕ್ಕೆ ವಿಧಾನಸಭಾಧ್ಯಕ್ಷರು ನೀನು ಕೂಡ ದೇಶದಲ್ಲಿ ಒಳ್ಳೆಯ ಹೆಸರು ಮಾಡ್ತೀಯಾ ಎಂದು ಹಾರೈಸಿದರು ಈ ಸಂದರ್ಭದಲ್ಲಿ ಬಾಲಕಿಯ ತಂದೆ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಇಂದಾಜೆ ಉಪಾಧ್ಯಕ್ಷ ಭಾಸ್ಕರ್ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಉಪಸ್ಥಿತರಿದ್ದರು.

Read More News

Scroll to Top