ಮಂಗಳೂರು: ಶ್ರೀ ರಕ್ತೇಶ್ವರಿ ಮತ್ತು ಪಂಚದೇವತಾ ಸಾನಿಧ್ಯ ಶ್ರೀರಾಮನಗರ,ವಾಮಂಜೂರು ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ ಸಮಿತಿ(ರಿ)ವತಿಯಿಂದ ಅಕ್ಟೋಬರ್ 9ರಿಂದ 13ರವರೆಗೆ ವಾಮಂಜೂರಿನ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು,ಇದರ ಕಾರ್ಯಾಲಯವನ್ನ ವಾಮಾಂಜೂರಿನ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು(ಸೆ.17) ಉದ್ಘಾಟಿಸಲಾಯಿತು.ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ ಪ್ರಮುಖರಾದ ಚಂದ್ರಶೇಖರ ರಾಮನಗರ,ಸದಾನಂದ ಪೂಜಾರಿ,ಮೋಹನ್ ಪಚ್ಚನಾಡಿ,ರಾಕೇಶ್ ಶೆಟ್ಟಿ ಅಮೃತನಗರ,ಅಜಯ್ ಮಂಗಳನಗರ,ಬಿಪಿನ್ ವಾಮಂಜೂರು,ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ,ವೆಂಕಪ್ಪ ಅಮೃತ ನಗರ,ನವೀನ್ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.








































































































































































































