ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ನ. 13 ರಂದು ಉಪ ಚುನಾವಣೆ.

98.2K Views 16 Oct 2024

ಬೆಂಗಳೂರು :ಎಚ್ ಡಿಕೆ, ಬೊಮ್ಮಾಯಿ, ಇ. ತುಕಾರಾಂ ಅವರು ಸಂಸದರಾಗಿ ಆಯ್ಕೆಯಾಗಿರುವುದ್ದರಿಂದ ಅವರಿಂದ ತೆರವಾದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ನ. 13 ರಂದು ಉಪ ಚುನಾವಣೆ ನಡೆಯಲಿದ್ದು, ನ. 23 ರಂದು ಫಲಿತಾಂಶ ಹೊರಬೀಳಲಿದೆ. ಸಂಡೂರು, ಚನ್ನಪಟ್ಟಣ, ಶಿಗ್ಗಾoವಿ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಎನ್ ಡಿ ಎ ಅಭ್ಯರ್ಥಿಗಳು (ಬಿಜೆಪಿ -ಜೆಡಿಎಸ್ ಮೈತ್ರಿ) ಸ್ಪರ್ಧಿಸಲಿದ್ದಾರೆ. ಈ ಪೈಕಿ, ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಿದರೆ,ಸಿ. ಪಿ. ಯೋಗೇಶ್ವರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಆಗ ಅಲ್ಲಿ ಕಾಂಗ್ರೆಸ್ ಗೆ ಅನುಕೂಲವಾಗಬಹುದು. ಚನ್ನಪಟ್ಟಣ ಎಚ್ ಡಿಕೆ ಗೆದ್ದಿದ್ದ ಕ್ಷೇತ್ರವಾಗಿದ್ದು, ಇಲ್ಲಿ ಕಾಂಗ್ರೆಸ್ ನಿಂದ ಡಿ. ಕೆ. ಸುರೇಶ್ ಸ್ಪರ್ಧಿಸುವ ಸುದ್ದಿಯಿದೆ. ಇದು ಒಂದು ರೀತಿಯಲ್ಲಿ ಡಿಕೆಶಿ ಮತ್ತು ಎಚ್ ಡಿ ಕೆ ಅವರ ಪ್ರತಿಷ್ಠೆಯ ಕಣವಾಗಿದೆ.

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top