ಮಂಗಳೂರು :ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಎದುರು 1600ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ವಿಧಾನಪರಿಷತ್ ಉಪಚುನಾವಣೆಯ ಮತ ಎಣಿಕೆಯು ಮಂಗಳೂರಿನ ಸಂತ ಎಲೋಷಿಯಸ್ ಪದವಿ ಪೂರ್ವ ಕಾಲೇಜ್ ನಲ್ಲಿ ಇಂದು ನಡೆದಿದ್ದು,ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತಿರಿದ್ದರು.













































































































































































































