ಉಡುಪಿಯ ಪಲಿಮಾರು ಮಠದ ಪೂಜ್ಯ ಸ್ವಾಮೀಜಿಯವರೊಂದಿಗೆ ಪ್ರಯಾಗ್ ರಾಜ್‌ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ

112.7K Views 6 Feb 2025

ಮಂಗಳೂರು: ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ಶ್ರೀ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು. ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ
ನೇತೃತ್ವದಲ್ಲಿ ನೆರವೇರಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ತಂಡದಲ್ಲಿದ್ದರು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top