ಉಳ್ಳಾಲ: ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಕುಂಪಲ ರಥೋತ್ಸವ-2025 ಇದರ ಆಮಂತ್ರಣ ಪತ್ರಿಕೆಯನ್ನು ಕಂಕನಾಡಿ ಗರಡಿ ಕ್ಷೇತ್ರದ ಶ್ರೀ ಗಂಗಾಧರ ಶಾಂತಿ ಭಾನುವಾರ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಸೇವಾ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.



















































































































































































