ವೈವಿಧ್ಯಮಯ ಸಾಹಿತ್ಯದಿಂದ ಭಾಷೆ ಸಮೃದ್ಧ *ಮುದ್ದು ಮೂಡುಬೆಳ್ಳೆ ಅಭಿಮತ *ತುಲುವೆರೆ ಕಲ ‘ಉದಿಪು ನೇಸರೆ’ ಕವಿಗೋಷ್ಠಿ

110.6K Views 18 Feb 2025

ಮಂಗಳೂರು: ವೈವಿಧ್ಯತೆಯಿಂದ ಕೂಡಿದ ಸಾಹಿತ್ಯ ಪ್ರಕಾರಗಳ ರಚನೆ ಭಾಷೆಯ ಬೆಳವಣಿಗೆಗೆ ಪೂರಕ. ಈ ನಿಟ್ಟಿನಲ್ಲಿ ಕವಿ, ಸಾಹಿತಿಗಳು ಗಮನವಹಿಸಬೇಕು. ಭಾಷೆಯ ಬಗೆಗಿನ ತುಡಿತ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗುತ್ತದೆ ಎಂದು ಹಿರಿಯ ಸಾಹಿತಿ ಮುದ್ದು ಮೂಡುಬೆಳ್ಳೆ ಹೇಳಿದರು.
ತುಲುವೆರೆ ಕಲ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಆಶ್ರಯದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಉದಿಪು ನೇಸರೆ’ ತುಳು ಕವಿಗೋಷ್ಠಿಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.


ಉದ್ಯಾನದಲ್ಲಿ ಅರಳುವ ಪುಷ್ಪಗಳ ರೀತಿ ಬಹುಬಗೆಯ ಸಾಹಿತ್ಯ ರಚನೆಯಿಂದ ಕವಿ, ಸಾಹಿತಿಗಳು ಪರಿಪೂರ್ಣತೆ ಪಡೆಯಲು ಸಾಧ್ಯ ಎಂದರು.
ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,
ಹಿರಿಯ ಸಾಹಿತಿ ಸದಾನಂದ ನಾರಾವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಅಗಲಿದ ಪತ್ರಕರ್ತ ಶಶಿ ಬಂಡಿಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ‘ತುಲುವೆರೆ ಕಲ’ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಒತ್ತಡ ನಿವಾರಣೆ ಸಾಧ್ಯ ಎಂದರು.
ಪತಂಜಲಿ ಯೋಗ ಶಿಕ್ಷಣ ಟ್ರಸ್ಟ್ ಜತೆ ಕಾರ್ಯದರ್ಶಿ ಪ್ರಭಾ ಚಂದ್ರಶೇಖರಯ್ಯ ಉಪಸ್ಥಿತರಿದ್ದರು. ಸುಮಂಗಲಾ ದಿನೇಶ್ ಶೆಟ್ಟಿ ಕುಂಪಲ ಸ್ವಾಗತಿಸಿದರು. ರಾಜೇಶ್ ಶೆಟ್ಟಿ ದೋಟ ವಂದಿಸಿದರು. ಶ್ರೀಶಾವಾಸವಿ ಕಾರ್ಯಕ್ರಮ ನಿರೂಪಿಸಿದರು.
ಭಾಗವಹಿಸಿದ ಕವಿಗಳು:
ಕವಿಗೋಷ್ಠಿಯಲ್ಲಿ ಜಯರಾಮ ಪಡ್ರೆ, ಅಶ್ವಿಜಾ ಶ್ರೀಧರ್, ಉಮೇಶ್ ಶಿರಿಯ, ರಂಜಿತ್ ಸಸಿಹಿತ್ಲು, ಸತೀಶ್ ಬಿಳಿಯೂರು, ಬಾಲಿನಿ ಎನ್.ಕರ್ಕೇರಾ, ಅಶೋಕ ಎನ್.ಕಡೇಶಿವಾಲಯ, ಅಶ್ವತ್ಥ್ ಬರಿಮಾರು, ಶಶಿಕಲಾ ಭಾಸ್ಕರ್ ದೈಲಾ, ಆಕೃತಿ ಭಟ್, ನಿಶಾನ್ ಅಂಚನ್, ಅಶ್ವಿನಿ ತೆಕ್ಕುಂಜ, ಮಲ್ಲಿಕಾ ಜೆ.ರೈ ಗುಂಡ್ಯಡ್ಕ, ಪದ್ಮನಾಭ ಪೂಜಾರಿ ಬಂಟ್ವಾಳ, ಪರಿಮಳಾ ಮಹೇಶ್ ರಾವ್, ಶ್ರೀಶಾವಾಸವಿ ತುಳುನಾಡ್, ಮುರಳೀಧರ ಆಚಾರ್ಯ, ಅನುರಾಧಾ ರಾಜೀವ್ ಸುರತ್ಕಲ್, ವಿಶ್ವನಾಥ ಕುಲಾಲ್ ಮಿತ್ತೂರು, ರೇಮಂಡ್ ಡಿ’ಕುನ್ಹ ತಾಕೊಡೆ, ಸುಮಂಗಲಾ ದಿನೇಶ್ ಶೆಟ್ಟಿ ಕುಂಪಲ, ರಾಜೇಶ್ ಶೆಟ್ಟಿ ದೋಟ, ಶ್ಯಾಮ್‌ಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಪ್ರಶಾಂತ್ ಆಚಾರ್ಯ, ಅನನ್ಯಾ ಕರ್ಕೇರ, ಸವಿತಾ ಕರ್ಕೇರ, ವೈಷ್ಣವಿ ಸುಧೀಂದ್ರ ರಾವ್ ಭಾಗವಹಿಸಿದ್ದರು.
…….

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top