ಮಧೂರು ಬ್ರಹ್ಮಕಲಶೋತ್ಸವ” ಮಂಗಳೂರಿನಲ್ಲಿ ನಾಳೆ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ಉದ್ಘಾಟನೆ

111.6K Views 15 Mar 2025

ಶ್ರೀ ಕ್ಷೇತ್ರ ಮಧೂರಿನಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ” ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ” ದ ಉದ್ಘಾಟನೆಯು ನಾಳೆ ತಾ.15, ಶನಿವಾರ ಬೆಳಿಗ್ಗೆ ಗಂಟೆ 10-00 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿರುವುದು.
ಕೊಂಡೆವೂರಿನ ಪ.ಪೂ.ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಕಟೀಲು ಹರಿನಾರಾಯಣ ಆಸ್ರಣ್ಣ, ಮಧೂರು ಕ್ಷೇತ್ರದ ತಂತ್ರಿಗಳಾದ ದೇರೆಬೈಲು ಶಿವಪ್ರಸಾದ್ ತಂತ್ರಿ, ಶರವು ರಾಘವೇಂದ್ರ ಶಾಸ್ತ್ರಿ , ಇತರ ಧಾರ್ಮಿಕ ಕ್ಷೇತ್ರಗಳ ಪ್ರಮುಖರು, ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು.
ಬನ್ನಿ ಭಾಗವಹಿಸಿ
ಎಸ್.ಪ್ರದೀಪ ಕುಮಾರ ಕಲ್ಕೂರ , 9845083736

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top