ಅಂಬೇಡ್ಕರ್ ದಿನಾಚರಣೆ ಪ್ರಯುಕ್ತ ಬಂಟ್ವಾಳದ ಸರಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

115.9K Views 15 Apr 2025

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಸಮಿತಿ ಇದರ ಆಶ್ರಯದಲ್ಲಿ ತಾ. 14-04-2025ನೇ ಸೋಮವಾರ ಡಾ| ಬಿ. ಆರ್. ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ ಪ್ರಯುಕ್ತ ಬಂಟ್ವಾಳ ಸರಕಾರಿ ಆಸ್ಪತ್ರೆ ಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವೈದ್ಯರು ಸಮೀಕ್ಷಾ, ಶ್ರೀಮತಿ ವಾಣಿ ಕೆ. ಮತ್ತು ಸಿಬ್ಬಂದಿ ವರ್ಗ, ತಾಲೂಕು ಅಧ್ಯಕ್ಷರಾದ ಸಂತೋಷ್ ಭಂಡಾರಿಬೆಟ್ಟು, ಗೌರವಾಧ್ಯಕ್ಷರು ಧರ್ಣಪ್ಪ ಬಡಗಬೆಳ್ಳೂರು, ಗೌರವ ಸಲಹೆಗಾರರಾದ ರಾಜ ಚೆಂಡ್ತಿಮಾರ್, ಮೋಹನ್ ಬಡಗಬೆಳ್ಳೂರು, ಉಪಾಧ್ಯಕ್ಷರಾದ ಚಂದ್ರಹಾಸ್ ಅರ್ಬಿಗುಡ್ಡೆ, ಕೋಶಾಧಿಕಾರಿ ಜಯಂತಿ ವಾಮದಪದವು, ಸಂಘಟನ ಕಾರ್ಯದರ್ಶಿ ನಾರಾಯಣ ಬೊಂಡಲ, ಜಾನಕಿ ವಾಮದಪದವು ಉಪಸ್ಥಿತರಿದ್ದರು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top