ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಇಲ್ಲಿ ಕಳೆದ 25 ವರ್ಷಗಳಿಂದ ಸಿಬ್ಬಂದಿಯಾಗಿದ್ದ ವಿಶ್ವನಾಥ ಜೋಗಿಯವರು ಎಪ್ರಿಲ್ 30ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ. ಅವರಿಗೆ ವಾರ್ತಾ ಇಲಾಖೆ ಮಂಗಳೂರಿನ ಕಚೇರಿಯಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಷಾ ಅವರ ನೇತೃತ್ವದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು.


ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೇಪಾಡಿ, ಪತ್ರಕರ್ತರು ಮತ್ತು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.


















































































































































































