ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧ ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

99.2K Views 21 May 2025

ಮಂಗಳೂರು, ಮೇ.21:
ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ
ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,
ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.
ಐವತ್ತು ದಶಕಗಳ ಹಿಂದೆಯೇ ಸುಮಾರು 37 ಧರ್ನಶಿಶು (ಮಕ್ಕಳ ಪೋಷಕ) ಹೊಂದಿ ಹಿತಪೋಷಕರೆಣಿಸಿ ಶ್ರೇಷ್ಠವ್ಯಕ್ತಿವೆಂದೇ ಗುರುತಿಸಿ ಜನಾನುರೆಸಿದ್ದರು. ಬಳಿಕ ಬಂಟ್ವಾಳ ಮೊಡಂಕಾಪು ಇಲ್ಲಿನ ಇನ್ಫೆoಟ್ ಜೀಸಸ್ ಚರ್ಚ್ ನಲ್ಲಿ ಪಾಲನಾ ಸಮಿತಿ ಸದಸ್ಯರಾಗಿ,
ತಿಸ್ರಿ ಒಡ್ದ್ ಇದರ ಅಧ್ಯಕ್ಷರಾಗಿ, ಕಥೋಲಿಕ್ ಸಭಾ ಇದರ ಸಕ್ರಿಯ ಸದಸ್ಯರಾಗಿ, ಕೊಡುಗೈದಾನಿಯಾಗಿ ಅನುಪಮ ಸೇವೆ ಸಲ್ಲಿಸಿದ್ದು, ಸದ್ಯ ಮಂಗಳೂರು ಬಿಕರ್ಣಕಟ್ಟೆ ಇಲ್ಲಿನ ಜಯಶ್ರೀಗೇಟ್ ನ ಸ್ವನಿವಾಸದಲ್ಲಿ ನೆಲೆಸಿದ್ದರು.
ಮೃತರು ಇಬ್ಬರು ಸುಪುತ್ರಿಯರು, ಮೂವರು ಸುಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು
ನಾಳೆ ಗುರುವಾರ (ಮೇ. 22) ಮಧ್ಯಾಹ್ನ 2:00 ಗಂಟೆಗೆ ಸ್ವನಿವಾಸಕ್ಕೆ ತಂದು ಬಳಿಕ 2:45 ರಿಂದ 3:30ರ ವರೆಗೆ ಬಜ್ಜೋಡಿ ಅಲ್ಲಿನ ಇನ್ಫೆಂಟ್ ಮೇರಿ ಚರ್ಚ್‌ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗುವುದು. 3:30 ಗಂಟೆಗೆ ಪೂಜೆ, ನಂತರ ಸೈoಟ್ ಸೆಬಾಸ್ಟಿಯನ್ ಚರ್ಚ್ (ಬೆಂದೂರು) ಇದರ ಸಮಾಧಿಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Read More News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top