ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಮೂರನೇ ವರುಷದ ಸಮಾಲೋಚನ ಸಭೆ

110.5K Views 31 May 2025

ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಮೂರನೇ ವರುಷದ ಸಮಾಲೋಚನ ಸಭೆಯು ಬಿ. ಸಿ ರೋಡಿನಲ್ಲಿ ನಡೆಯಿತು. ಮಳೆಗಾಲದಲ್ಲಿ ವೃತ್ತಿಪರ ಯಕ್ಷಗಾನ ಕಲಾವಿದರು ಜೀವನೋಪಾಯಕ್ಕಾಗಿ ಪರಂಪರೆಯಿಂದ ನಡೆದು ಬಂದ ಮಾರ್ಗವೇ ಮನೆಮನೆ ಯಕ್ಷಗಾನ ಇದು ವ್ಯಾಪಾರಿಕರಣವಾಗದೆ ದೇವರ ಸೇವೆ ಎಂಬ ಮನೋಭಾವನೆ ಯೊಂದಿಗೆ ಕಲಾಭಿಮಾನಿಗಳ ಮನಸಿಗೆ ಹಿತವಾಗುವ ಸಭ್ಯತೆಯ ಪ್ರದರ್ಶನವನ್ನು ನೀಡುವುದರೊಂದಿಗೆ ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಸಲಹೆ ನೀಡಿದರು.. ಚಿಕ್ಕ ಮೇಳದಲ್ಲಿ ದುಡಿಯುತ್ತಿದ್ದ ಕಲಾಮಾತೆಯ ಮಡಿಲು ಸೇರಿದ ಪ್ರವೀತ್ ಆಚಾರ್ಯ ಗುರುವಾಯನಕೆರೆ ಮತ್ತು ಸತೀಶ್ ಆಚಾರ್ಯ ವೇಣೂರು, ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಂದಿನ ಮಳೆಗಾಲದ ತಿರುಗಾಟವನ್ನು ತಳಕಲ ಕಾಶಿ ಶ್ರೀವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಜೂನ್ 5ನೇ ತಾರೀಕಿನಂದು ಗಣ್ಯರ ಉಪಸ್ಥಿತಿಯಲ್ಲಿ ಆರಂಭಿಸುವುದೆಂದು ತೀರ್ಮಾನಿಸಲಾಯಿತು. ಉಪಾಧ್ಯಕ್ಷರುಗಳಾದ ಭಾಗವತರಾದ ಮೋಹನ್ ಕಲಂಬಾಡಿ, ರಮೇಶ್ ಕುಲಶೇಖರ, ಕೋಶಾಧಿಕಾರಿ ದಿವಾಕರದಾಸ್ ಕಾವಲ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ಕುಮಾರ್ ಮಾಲೇಮಾರ್ , ಪದಾಧಿಕಾರಿಗಳು ಮತ್ತು ತೆಂಕುತಿಟ್ಟು ಚಿಕ್ಕ ಮೇಳಗಳ ಸಂಚಾಲಕರು, ಮತ್ತು ಕಲಾವಿದರು ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಯಕ್ಷಬೊಳ್ಳಿ ಕಡಬ ದಿನೇಶ್ ರೈ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top