ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಎಂಎಲ್‌ಸಿ ಐವನ್ ಡಿಸೋಜ ಆಯ್ಕೆ

113.8K Views 5 Jun 2025

ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಘನ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದ.ಕ ಜಿಲ್ಲಾ ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ, ಪದಾಧಿಕಾರಿಗಳು ಮತ್ತು‌ವೇದಿಕೆಯ ನಿವೃತ್ತ ಸರಕಾರಿ ನೌಕರರು ಅವರಿಗೆ ಶುಭ ಹಾರೈಸುವ ಜತೆಗೆ ತಮ್ಮ ವೇದಿಕೆಯ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನ್ಯಾಯ ದೊರಕಿಸಿಕೊಡುವಂತೆ ಮನವಿಯನ್ನು ಸಲ್ಲಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top