ಆಂಜೆಲೋರ್‌ ಚರ್ಚಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ

104.3K Views 11 Jun 2025

ಮಂಗಳೂರು: ಮಂಗಳೂರು ನಗರದ ನಾಗುರಿಯ ಗಾರ್ಡಿಯನ್ ಏಂಜೆಲ್ ಚರ್ಚ್ ನ ಕ್ಯಾಥೋಲಿಕ್ ಸಭಾ ಘಟಕ ಮತ್ತು ಆರೋಗ್ಯ ಆಯೋಗದ ಆಶ್ರಯದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮನೆಯಲ್ಲಿ ಸಂಭವಿಸುವ ವಿದ್ಯುತ್ ಅಪಘಾತ, ನೀರಿಗೆ ಬಿದ್ದು ದುರಂತ, ವಿಷದ ಹಾವು ಕಡಿತ, ಆಹಾರ ಸೇವಿಸುವಾಗ ಗಂಟಲಿನಲ್ಲಿ ಸಿಲುಕಿ ಕೊಳ್ಳುವುದು, ಕುಸಿದು ಬೀಳುವ ಸಂದರ್ಭ ಮುಂತಾದ ಸಮಯದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ತರಬೇತಿ ನೀಡಲಾಯಿತು.
ಆಂಜೆಲೋರ್‌ ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಫ್ರೆಡ್ರಿಕ್ ಮೊಂತೆರೊ, ವಾಸ್ತವ್ಯ ಧರ್ಮಗುರು ವಂದನೀಯ ಫಾ. ಸ್ಟೇನಿ ಫೆರ್ನಾಂಡಿಸ್, ಚರ್ಚ್ ಉಪಾಧ್ಯಕ್ಷ ಪಾವ್ಲ್ ರೊಡ್ರಿಗಸ್, ಕಾರ್ಯದರ್ಶಿ ಲೊನಿನಾ ಡಿ’ ಸೋಜಾ, ಸರ್ವ ಆಯೋಗಗಳ ಸಂಚಾಲಕಿ ರೆನಿಟಾ ಮಿನೇಜಸ್, ಫಾದರ್ ಮುಲ್ಲರ್ ಆಸ್ಪತ್ರೆಯ ಡಾ. ರಿತೇಶ್ ಡಿ’ ಕುನ್ಹಾ, ಚರ್ಚಿನ ಮಾಜಿ ಉಪಾಧ್ಯಕ್ಷ ಆಲ್ಬರ್ಟ್ ಲಸ್ರಾದೊ, ಫಿಲೋಮಿನಾ ತಾವ್ರೋ ಮುಂತಾದವರು ಉಪಸ್ಥಿತರಿದ್ದರು

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top