ವಿಮಾನ ನಿಲ್ದಾಣದಲ್ಲೇ ಕಡತಗಳಿಗೆ ಸಹಿ ಹಾಕುವ ಮೂಲಕ ಸೇವೆಗೆ ಸಿದ್ದರಾದ ಹಾಜಿ ಸ್ಪೀಕರ್ ಯು.ಟಿ ಖಾದರ್ ಫರೀದ್

111.2K Views 11 Jun 2025

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಿ ಇಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದಾಗ ಅವರನ್ನು ಬರಮಾಡಿಕೊಡಲು ಕುಟುಂಬಸ್ಥರು ಸ್ನೇಹಿಗಳು ಕಾಯುತ್ತಿದ್ದರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಬಾಕಿ ಇರುವ ಕಡತಗಳಿಗೆ ಸಹಿ ಹಾಕುವ ಮೂಲಕ ತನ್ನ ಕರ್ತವ್ಯವನ್ನು ನಿರ್ವಹಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಅಧಿಕಾರಿಗಳನ್ನು ಕರೆಸಿ ಇಷ್ಟು ದಿನ ಬಾಕಿ ಉಳಿದ ಹಲವು ಕಡತಗಳನ್ನು ಪರಿಶೀಲಿಸಿ ಸಹಿ ಹಾಕಿ ಕಳಿಸಿದ್ದಾರೆ.
ಹಜ್ಜ್ ಯಾತ್ರೆ ಮುಗಿಸಿ ಬರುವಾಗ ಸಹಜವಾದ ಅರೋಗ್ಯ ಏರು ಪೇರನ್ನು ಲೆಕ್ಕಿಸದೆ ಸೇವೆಗೆ ಇಳಿದಿರುವುದು ಅವರ ಕೆಲಸದ ಮೇಲಿರುವ ಗೌರವ ಎತ್ತಿ ತೋರಿಸಿವೆ.
ಇದೀಗ ಬೆಂಗಳೂರಿನಲ್ಲೇ ಕೆಲವೊಂದು ಸಭೆಯ ಬಳಿಕ ಮಂಗಳೂರು ತಲುಪಲಿರುವ ಹಾಜಿ ಯು.ಟಿ ಖಾದರ್ ಫರೀದ್ ನಾಳೆ ದಿನ ಪೂರ್ತಿ ಸೇವೆಯಲ್ಲಿ ನಿರತರಾಗಲಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top