ರೆಡ್‌ಕ್ರಾಸ್‌ನಿಂದ ವಿಶ್ವ ರಕ್ತದಾನಿಗಳ ದಿನಾಚರಣೆ. ನಿರಂತರ ರಕ್ತದಾನದಿಂದ ಆರೋಗ್ಯಪೂರ್ಣ ಹೃದಯ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಮಾಹಿತಿ

108.9K Views 14 Jun 2025

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಡಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಮಾತನಾಡಿ ‘ ನಿರಂತರ ರಕ್ತದಾನ ಮಾಡುವ ರಕ್ತದಾನಿಗಳ ದೇಹದಲ್ಲಿ ಶುದ್ದ ರಕ್ತ ಉತ್ಪಾದನೆಯಾಗುತ್ತಲೇ ಇರುವ ಕಾರಣ ಹೆಚ್ಚು ಆರೋಗ್ಯವಂತರಾಗಿರುತ್ತಾರೆ. ಇದರಿಂದ ಅವರ ಹೃದಯವೂ ಆರೋಗ್ಯ ಪೂರ್ಣವಾಗಿರುತ್ತದೆ. ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯ’ಎಂದರು.
ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಅವಶ್ಯ ಇರುವವರಿಗೆ ರೆಡ್‌ಕ್ರಾಸ್‌ನ ಬ್ಲಡ್ ಬ್ಯಾಂಕ್ ವತಿಯಿಂದ ಸಂಪೂರ್ಣ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಇರುವವರು ಯಾವುದೇ ಆಸ್ಪತ್ರೆಯಲ್ಲಿ ದಾಖಲಾದರೂ ರೆಡ್‌ಕ್ರಾಸ್‌ನಿಂದ ಉಚಿತವಾಗಿ ರಕ್ತ ಒದಗಿಸಲು ಯೋಜನೆ ರೂಪಿಸಲಾಗುವುದು ಎಂದರು.
ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್.ಡಿ. ಎಸ್., ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ನಿರ್ದೇಶಕಿ ಡಾ.ಸೀಮಾ.ಎಸ್. ಶೆಣೈ, ಕೆಎಂಸಿಯ ಆರ್ಥೋ ವಿಭಾಗದ ಮುಖ್ಯಸ್ಥ ಡಾ.ಕೆ.ಆರ್.ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
15ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಉಪಾಧ್ಯಕ್ಷ
ಡಾ.ಸತೀಶ್ ರಾವ್, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಪಿ.ಬಿ.ಹರೀಶ್ ರೈ, ಸಲಹೆಗಾರರಾದ
ಪ್ರಭಾಕರ ಶರ್ಮ, ಕೆ.ಸುಧಾಕರ್‌ಉಪಸ್ಥಿತರಿದ್ದರು.ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಸ್ವಾಗತಿಸಿ, ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್‌ನ ಯೂತ್ ರೆಡ್‌ಕ್ರಾಸ್ ಅಧಿಕಾರಿ ಡಾ.ರಮ್ಯ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಬಿ.ಅಪೂರ್ವ ರಕ್ತದಾನಿಗಳ ವಿವರ ನೀಡಿದರು. ವೈಷ್ಣವಿ ಆಚಾರ್ ಕಾರ್ಯಕ್ರಮ ನಿರೂಪಿಸಿದರು.
ರಕ್ತದಾನಿಗಳಿಗೆ ಸನ್ಮಾನ
ಅಧಿಕ ಬಾರಿ ರಕ್ತದಾನ ಮಾಡಿದ ಕರುಣಾಕರ.ಎಂ.ಎಚ್.ಮಂಗಳೂರು( 71ಬಾರಿ), ಸೀತಾರಾಮ ಗೌಡ ಪುತ್ತೂರು (65), ಕೆ.ವಿದ್ಯಾಕುಮಾರ್ ಬೆಳ್ತಂಗಡಿ (51), ರಾಘವೇಂದ್ರ ರಾವ್, ಮಂಗಳೂರು (40), ಪ್ರಕಾಶ್ ಬಾಳಿಗಾ ,ಬಂಟ್ವಾಳ (36),
ಶರತ್.ಬಿ.ಎಸ್., ಸುಳ್ಯ( 32), ಚಂದ್ರಶೇಖರ .ಜಿ., ಮಂಗಳೂರು (29), ದೇವಿಪ್ರಸಾದ್ ಶೆಟ್ಟಿ , ಸುಳ್ಯ ( 27), ನವೀನ್ ,ಸುಳ್ಯ (25), ಬಾಲಕೃಷ್ಣ ಪಿ.ಎಸ್. ಸುಳ್ಯ ( 20), ಶಿವಾನಂದ.ಕೆ.ಆರ್. ಸುರತ್ಕಲ್ (18), ಸಂತೋಷ್ ಕುಮಾರ್ ರೈ ಮಂಗಳೂರು ಮತ್ತು
ಕಾರ್ತಿಕ್.ಆರ್.ಪದ್ಮಶಾಲಿ ಕೊಣಾಜೆ ( ತಲಾ 15 ಬಾರಿ) ಇವರುಗಳನ್ನು ಸನ್ಮಾನಿಸಲಾಯಿತು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top