ಜೂ.26ರಂದು ರೆಡ್‌ಕ್ರಾಸ್‌ನಿಂದಮಾದಕ ದ್ರವ್ಯ ವಿರೋಧಿ ದಿನಾಚರಣೆ

117.6K Views 25 Jun 2025

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಜೂ.26ರಂದು ಮಧ್ಯಾಹ್ನ 3ಕ್ಕೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಾಣೆ ವಿರೋಧಿ ದಿನಾಚರಣೆ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಫಾ.ಮುಲ್ಲರ್ ಮೆಡಿಕಲ್ ಕಾಲೇಜಿನ ಪ್ರೊ.ಡಾ.ಅರುಣ ಯಡಿಯಾಳ್, ಲೋಕಾಯುಕ್ತ ಡಿಎಸ್‌ಪಿ ಡಾ.ಗಾನ.ಪಿ.ಕುಮಾರ್ , ರಾಮಕೃಷ್ಣ ಕಾಲೇಜಿನ ಸಂಚಾಲಕ ಡಾ.ಸಂಜೀವ ರೈ, ಪ್ರಾಂಶುಪಾಲೆ ಡಾ.ಅನಸೂಯ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top