ಕೂಳೂರು ಚರ್ಚ್: ಕ್ಯಾಥೋಲಿಕ್ ಸಭಾ ಮತ್ತು ಐ .ಸಿ.ವೈ.ಎಂ. ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ

116K Views 26 Jun 2025

ಮಂಗಳೂರು: ಕೂಳೂರು ಸಂತ ಅಂತೋನಿ ಚರ್ಚಿನ ಕ್ಯಾಥೋಲಿಕ್ ಸಭಾ ಮತ್ತು ಐ.ಸಿ.ವೈ.ಎಂ. ಘಟಕದ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ರವಿವಾರ ಜೂನ್ 22 ರಂದು ಕೂಳೂರು ಮೇಲ್ ಕೊಪ್ಪಲ ಶ್ರೀಮತಿ ಮೇಝಿ ಟೀಚರ್ ಅವರ ಗದ್ದೆಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಚರ್ಚಿನ ಧರ್ಮಗುರು ವಂದನೀಯ ಫಾ. ವಿಕ್ಟರ್ ವಿಜಯ್ ಲೋಬೊ, ಮುಖ್ಯ ಅತಿಥಿಗಳಾಗಿದ್ದ ಎಪಿಸ್ಕೋಪಲ್ ಸಿಟಿ ವಲಯದ ಕ್ಯಾಥೋಲಿಕ್ ಸಭಾ ಅಧ್ಯಕ್ಷರಾದ ಐಡಾ ಪುರ್ಟಾಡೊ, ಐ.ಸಿ.ವೈ.ಎಂ. ಕೇಂದ್ರೀಯ ಸಮಿತಿ ಅಧ್ಯಕ್ಷ ವಿನ್ ಸ್ಟನ್ ಜೋಯಲ್ ಸಿಕ್ವೇರಾ ಮತ್ತು ತೀರ್ಪುಗಾರ ಪ್ರವೀಣ್ ಲೋಬೊ ಬಿಜೈ ಅವರು ಸಂಯುಕ್ತವಾಗಿ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗದ್ದೆಯಲ್ಲಿ ನಡೆದ ಸ್ಪರ್ಧಾ ಕೂಟದಲ್ಲಿ ಮೊದಲ ಬಹುಮಾನವನ್ನು ಸೈಂಟ್ ಅನ್ನಾ ವಾರ್ಡ್, ದ್ವಿತೀಯ ಬಹುಮವನ್ನು ಸಂತ ಅಂತೋನಿ 3 ನೇ ವಾರ್ಡ್ ಹಾಗೂ ತೃತೀಯ ಬಹುಮಾನವನ್ನು ಸಂತ ಜೋಸೆಫ್ ವಾರ್ಡ್ ಪಡೆದು ಕೊಂಡಿತು. ಕಾರ್ಯಕ್ರಮದ ಅಧ್ಯಕ್ಷರು ಮತ್ತು ಮುಖ್ಯ ಅತಿಥಿಗಳು ವಿಜೇತರಿಗೆ ಬಹುಮಾನ ವಿತರಿಸಿದರು.
ಕ್ಯಾಥೊಲಿಕ್ ಸಭಾ ಕೂಳೂರು ಘಟಕದ ಅಧ್ಯಕ್ಷ ರೋವಿನ್ ಡಿ ಸೋಜಾ ಸ್ವಾಗತಿಸಿ ಐ.ಸಿ.ವೈ. ಎಂ. ಅಧ್ಯಕ್ಷ ಆರ್ವಿನ್ ಮೊಂತೆರೊ ವಂದಿಸಿದರು. ರೀಮಾ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top