ರೆಡ್‌ಕ್ರಾಸ್ ಸಮಿತಿಯಿಂದ ಜಿಲ್ಲಾಧಿಕಾರಿ ಭೇಟಿ

116.5K Views 4 Jul 2025

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಸಮಿತಿ ಸದಸ್ಯರು ದ.ಕ. ಜಿಲ್ಲಾಧಿಕಾರಿ ದರ್ಶನ್ .ಎಚ್.ವಿ ಅವರನ್ನು ಭೇಟಿಯಾಗಿ ಸ್ವಾಗತಿಸಿದರು. ಜಿಲ್ಲಾ ರೆಡ್‌ಕ್ರಾಸ್ ಹಮ್ಮಿಕೊಂಡಿರುವ ಸೇವಾ ಕಾರ್ಯ ಹಾಗೂ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿರುವ ಬಗ್ಗೆ ಸಮಿತಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ವಿವರ ನೀಡಿದರು. ಶೀಘ್ರದಲ್ಲೇ ಕಟ್ಟಡ ವೀಕ್ಷಿಸಲು ಆಗಮಿಸುವುದಾಗಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ರೆಡ್‌ಕ್ರಾಸ್‌ನ ಉಪಾಧ್ಯಕ್ಷ ಡಾ.ಸತೀಶ್ ರಾವ್,ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು.

ಫೋಟೋ : ರೆಡ್‌ಕ್ರಾಸ್
………

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top