108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

108.1K Views 10 Jul 2025

ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಕೆನರಾ ಪದವಿ ಪೂರ್ವ ಕಾಲೇಜ್ ಜಂಟಿ ಆಶ್ರಯದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಕೆನರಾ ಪದವಿ ಕಾಲೇಜು ಸಭಾಂಗಣದಲ್ಲಿ ಜುಲೈ 4 ರಂದು ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಪದವಿ ಪೂರ್ವ ಕಾಲೇಜು ಮಂಗಳೂರು. ಡೀನ್ ಗೋಪಾಲಕೃಷ್ಣ ಶೆಟ್ಟಿ .ಕೆ .ಎಂ. ವಹಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಸಂಘದ ಉದ್ಘಾಟನೆಯು ನಡೆಯಿತು.

ಸಾಹಿತ್ಯ ಅಭಿರುಚಿ ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ಅತಿಥಿಯಾಗಿ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕರಾದ ಬಿ. ರವೀಂದ್ರ ಶೆಟ್ಟಿ ಹಾಗೂ ಪ್ರಶಸ್ತಿ ವಿಜೇತ ಶಿಕ್ಷಕಿ, ಲೇಖಕಿ ಸುಧಾ ನಾಗೇಶ್ ಉತ್ತಮ ಮಾರ್ಗ ದರ್ಶನ ಮಾಹಿತಿ ನೀಡಿದರು. ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾ ಮಹೇಶ್ವರಿ ಕೆ.ಬಿ ಸಾಹಿತ್ಯ ಸಂಘದ ಮುಖ್ಯಸ್ಥರಾದ ಮಧುಕೇಶ್ವರ ಶಾಸ್ತ್ರಿ ಹಾಗೂ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್. ವಿ ಗೌರವ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕೆ ಶುಭ ಹಾರೈಸಿದರು.ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top