ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿ ಮಂಗಳೂರು ಜಂಟಿ ಆಶ್ರಯದಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ದಿನಾಂಕ 9/8/2025 ಶನಿವಾರ ಮಹರ್ಷಿ ವಾಲ್ಮೀಕಿ ಸಭಾಂಗಣ ಸಮಯ 10:30 ಕ್ಕೆ ನಡೆಯಲಿದೆ. 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮಹರ್ಷಿ ವಾಲ್ಮೀಕಿ ವಸತಿ ಶಾಲೆ. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನೀತಾ ವಹಿಸುವರು. ಮುಖ್ಯಸಂಪನ್ಮೂಲ ಅತಿಥಿಗಳಾಗಿ. ಕರಾವಳಿ ಡೈಲಿ ನ್ಯೂಸ್ ಚೀಪ್ ಎಡಿಟರ್ ಮಹೇಶ್ ಕನ್ನೇಶ್ವರ ಹಿರಿಯ ಬರಹಗಾರರಾದ ಸುಬ್ರಾಯ ಭಟ್, ದೂರದರ್ಶನ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರರಾದ. ರಾಜೇಶ್ ದಡ್ಡಂಗಡಿ, ಲೇಖಕಿ ನಿರ್ಮಲ ಉದಯಕುಮಾರ್ ಉಪಸ್ಥಿತರಿರುವರು. ಕಾರ್ಯಕ್ರಮ ನಿರೂಪಣೆ ಸುರೇಖಾ ಯಾಳವಾರ ಮಾಡುವರು. ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















































































































































































