ಋಣಾತ್ಮಕ ಭಾವನೆಯನ್ನು ತ್ಯಜಿಸಿ: ಕಯ್ಯೂರು ನಾರಾಯಣ ಭಟ್

103.7K Views 8 Aug 2025

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಪದಾಧಿಕಾರಿಗಳ ಸಭೆಯು ಪುತ್ತೂರು ಕೊಂಬೆಟ್ಟಿನ ಸೌಜನ್ಯ ನಿವಾಸದಲ್ಲಿ ಜರಗಿತು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ ನಾರಾಯಣ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಪ್ರತಿಷ್ಠಾನದ ಅಧ್ಯಕ್ಷರಾದ ಕಯ್ಯೂರು ನಾರಾಯಣ ಭಟ್ ಮಾತನಾಡಿ ಋಣಾತ್ಮಕವಾದ ಭಾವನೆಯನ್ನು ಬಿಟ್ಟು ಶಿಸ್ತು ಮತ್ತು ಬದ್ಧತೆಯಿಂದ ಪ್ರತಿಷ್ಠಾನದ ಚಟುವಟಿಕೆಗಳನ್ನು ನಡೆಸುವ ಅಗತ್ಯವಿದೆ ಎಂದರು.
ಪ್ರತಿಷ್ಠಾನದ ಐದು ವರ್ಷಗಳ ಸಿಂಹಾವಲೋಕನ ಮಾಡಿ ಕಾರ್ಯಕ್ರಮಗಳಿಗೆ ಹೊಸ ರೂಪವನ್ನು ಕೊಡುವ ಬಗ್ಗೆ ಮಾಹಿತಿ ನೀಡಿದರು.
ಪುತ್ತೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಆಳ್ವ ಮಾತನಾಡಿ ಆಗಸ್ಟ್ 17ರಂದು ಶ್ರೀ ಕ್ಷೇತ್ರ ಪಡುಮಲೆಯಲ್ಲಿ ಜರಗಲಿರುವ ಜಿಲ್ಲಾ ಮಟ್ಟದ ಪ್ರಥಮ ಕಾರ್ಯಾಗಾರದಲ್ಲಿ ಹಿರಿಯರಿಗೆ ಉಪಯುಕ್ತವಾಗುವ ಮೂರು ವಿಚಾರಗೋಷ್ಠಿಗಳು, ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಬಗ್ಗೆ ತಿಳಿಸಿದರು.
ಪ್ರತಿಷ್ಠಾನದ ವಾರ್ಷಿಕ ಜವಾಬ್ದಾರಿಗಳನ್ನು ನಿರ್ವಹಿಸಲು ಟ್ರಸ್ಟಿಗಳ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕೇಂದ್ರ ಸಮಿತಿಯ ಸಭೆಯನ್ನು ತಿಂಗಳ ಪ್ರಥಮ ಶನಿವಾರದ ಪೂರ್ವಾಹ್ನ ನಡೆಸುವುದೆಂದು ನಿರ್ಧರಿಸಲಾಯಿತು.
ಶಂಕರಿ ಶರ್ಮ ಪುತ್ತೂರು ಪ್ರಾರ್ಥಿಸಿ ಪ್ರತಿಷ್ಠಾನದ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು.ಉಪಾಧ್ಯಕ್ಷ ಎಂ. ಜಯರಾಮ ಭಂಡಾರಿ ಧರ್ಮಸ್ಥಳ ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯಕ್ರಮ ನಿರೂಪಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top