ಬೇಬಿ ಕುಂದರ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆ

100.8K Views 12 Aug 2025

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆಯು ಶ್ರೀ ಬೇಬಿ ಕುಂದರ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಇತ್ತೀಚಿನ 9&11 ಗೊಂದಲಗಳನ್ನು ನಿವಾರಿಸುವ ಬಗ್ಗೆ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರ ಜಂಟಿ ಸಭೆಯನ್ನು ಕರೆದು ಚರ್ಚಿಸುವಂತೆ ನಿರ್ಣಯ ತೆಗೆದುಕೊಳ್ಳಲಾಯಿತು.ಬಂಟ್ವಾಳ ಕಸಬಾ ಗ್ರಾಮದ ಗಿರಿಗುಡ್ಡೆ ಕೆರೆ ಅಭಿವೃದ್ಧಿ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಕಡತವನ್ನು ಕಳುಹಿಸಿಕೊಡಲು ನಿರ್ಣಯಿಸಲಾಯಿತು.ಬುಡಾ ಸದಸ್ಯರಾದ ಶ್ರೀ ಮನೋಹರ್ ಕುಲಾಲ್, ಅಬ್ದುಲ್ ರಜಾಕ್,ಹರೀಶ್ ಅಜ್ಜಿಬೆಟ್ಟು,ಅಮಟಾಡಿ ಪಂಚಾಯತ್ ಅಭಿವೃದ್ಧಿಅಧಿಕಾರಿ ಶ್ರೀ ಗೋಕುಲದಾಸ್ ಭಕ್ತ, ನರಿಕೊಂಬು ಪಂಚಾಯತ್ ಅಧಿಕಾರಿ ಶ್ರೀ ಹರೀಶ್, ಪುರಸಭಾ ಪ್ರತಿನಿಧಿ ಅಬ್ದುಲ್ ರಜಾಕ್ ಯೋಜನಾ ಸದಸ್ಯ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಡೊಂಬರ ಉಪಸ್ಥಿತರಿದ್ದರು.

Scroll to Top