ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವಾರ್ಷಿಕ ಸಭೆ

113.5K Views 14 Aug 2025

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವಾರ್ಷಿಕ ಸಭೆ ಬಿ.ಸಿ ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ವಲಯದ ಅಧ್ಯಕ್ಷರಾದ ಕಿಶೋರ್ ಎಸ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು, ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಜಿಲ್ಲಾ ಕೋಶಾಧಿಕಾರಿ ನವೀನ ರೈ , ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾದ ಆನಂದ್ ಏನ್, ಜಿಲ್ಲಾ ಸಂಚಾಲಕರಾದ ಕರುಣಾಕರ ಕಾಣಂಗಿ, ಎಸ್ ಕೆ ಪಿ ವಿವಿದ್ದುದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಹರೀಶ್ ರಾವ್, ವಲಯದ ಗೌರವಾಧ್ಯಕ್ಷರಾದ ಹರೀಶ್ ಕುಂದರ್, ವೇದಿಕೆಯಲ್ಲಿ ಉಪಸ್ಥಿತಿ ಇದ್ದರು,2023-2024ನೇ ಗತವರ್ಷದ ವರದಿಯನ್ನು ಮೋಹನ್ ಏಕದಂತ ವಾಚಿದರು, ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ವರದಿಯನ್ನು ವಾಚಿಸಿದರು, ಕೋಶಾಧಿಕಾರಿ ವರುಣ್ ಕಲ್ಲಡ್ಕ 24-25 ನೇ ಸಾಲಿನ ಲೆಕ್ಕ ಪತ್ರ ಮಂಡಿಸಿದರು.


ವಲಯದ ಅಧ್ಯಕ್ಷರು ಕಿಶೋರ್ ಕುಮಾರ್ ಮಾತನಾಡಿ ವಲಯವು ರಜತ ಸಂಭ್ರಮವನ್ನು ಆಚರಿಸುತಿದ್ದು, ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಅಂಚೆ ಜೀವವಿಮೆಯನ್ನು ಮಾಡಿಸಿದ್ದು, ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ಸಂಘದ ಸದಸ್ಯತ್ವನ್ನು ನವೀಕರಿಸಿದ ಸದಸ್ಯರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಸಂಘದಿಂದ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಹೇಳಿದರು. ಯೋಗೀಶ್ ಮೊಗರ್ನಾಡು, ವಂದಿಸಿದರು, ರಾಜೇಂದ್ರ ಹಾಗೂ ರೋಷನ್ ಕಾರ್ಯಕ್ರಮ ನಿರೂಪಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top