ದಿನಾoಕ 17/8/25 ರಂದು ಬಿ. ಸಿ. ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ತುರ್ತು ಸಭೆ ಯಲ್ಲಿ ಖಂಡನಾ ನಿರ್ಣಯ ಕೈಗೊಂಡಿತು. ಪೂಜ್ಯ ಹೆಗ್ಗಡೆ ಯವರ ಚಿಂತನೆ,ಖ್ಯಾತಿ ಅವರಿಗೆ ಸಿಗುವ ಮನ್ನಣೆ ಸಹಿಸದ ಕೆಲವೊಂದು ಪಟ್ಟ ಬದ್ದ ಹಿತಾ ಶಕ್ತಿ ಗಳು ಜೈನ ಸಮಾಜ ಮತ್ತು ಜೈನ ಮುನಿಗಳ ಮೇಲೆ ಇಲ್ಲ ಸಲ್ಲದ ಆರೋಪ ಕೆಲವೊಂದು ಜನ ಸಮೂಹ ವ್ನು ಕ್ಷೇತ್ರ ದ ವಿರುದ್ದ ಎತ್ತಿ ಕಟ್ಟುವ ಮೂಲಕ ಜನ ಸಾಮಾನ್ಯರಲ್ಲಿ ಭಯ ಆತಂಕ ಉಂಟು ಮಾಡುತ್ತಿದೆ. ಈ ಸಭೆ ಯಲ್ಲಿ ವೀಕ್ಷಕರಾಗಿ ವೀರ್ ರಾಜೇಶ ಜೈನ್ ಮಂಗಳೂರು, ಮಿಲನ್ ಘಟಕದ ಉಪಾಧ್ಯಕ್ಷರು ಅದ ವೀರ್ ಸುದರ್ಶನ್ ಜೈನ್, ಕಾರ್ಯದರ್ಶಿ ವೀರ್ ಸುಭಾಷ್ ಜೈನ್ , ಜೈನ್ ಮಿಲನ್ ಅಧ್ಯಕ್ಷ ರಾದ ವೀರ್ ರಾಜೇಂದ್ರಜೈನ್ ಘಟನೆ ಯನ್ನು ಖಂಡಿಸಿತು.

ಪಚ್ಚಾಜೆ ಜಿನರಾಜ ಅರಿಗರು ಭಾಗವಹಿಸಿ ಘಟನೆ ಯನ್ನು ಖಂಡಿಸಿದರು. ವೀರ್ ಜಯಕೀರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ವೀರ್ ಸುಭಾಶ್ಚಂದ್ರ ಜೈನ್ ಧನ್ಯವಾದ ನೀಡಿದರು. ಸಮಾಜದ ಎಲ್ಲಾ ಜೈನ್ ಭಾಂದವರು ಒಕ್ಕರಲಿನಿಂದ ಸುಳ್ಳು ಅಪಪ್ರಚಾರ ವಿರುದ್ಧ ಖಂಡನಾ ನಿರ್ಣಯ ಕೈಗೊಂಡಿರು.









































































































































































































